ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ ಶಂಕರ ಈ. ಹೆಬ್ಬಾಳ, ಹಿಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಜೆಟ್ನಲ್ಲಿ ಮುದ್ದೇಬಿಹಾಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಮಂಜೂರಾತಿ ಮಾಡಿ ಘೋಷಣೆ ಮಾಡಿದ್ದರು.ಶಾಸಕ ಸಿ.ಎಸ್.ನಾಡಗೌಡರು ಬಸ್ ನಿಲ್ದಾಣದ ಪಕ್ಕದಲ್ಲಿ ಠಾಣೆ ಕಾರ್ಯಾರಂಭಕ್ಕೆ ಸ್ಥಳಾವಕಾಶವನ್ನು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.ಆದರೆ ಈವರೆಗೂ ಠಾಣೆ ಆರಂಭವಾಗಿಲ್ಲ ಎಂದು ಗಮನ ಸೆಳೆದರು.ಇದಕ್ಕೆ ಉತ್ತರಿಸಿದ ಐಜಿಪಿ ಅವರು, ಈ ವಿಷಯ ಸರ್ಕಾರದ ಮಟ್ಟದಲ್ಲಿದ್ದು ಸಂಬAಧಿಸಿದವರೊAದಿಗೆ ಮಾತನಾಡುವುದಾಗಿ ತಿಳಿಸಿದರು.
ಮುದ್ದೇಬಿಹಾಳದ ಬಸವೇಶ್ವರ ವೃತ್ತದಲ್ಲಿ ನಿತ್ಯ ಬೆಳಗ್ಗೆ 8 ರಿಂದ 11ರವರೆಗೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ಅಲ್ಲಿ ಸಾರ್ವಜನಿಕರು,ಬೈಕ್ ಸವಾರರು ದಿನನಿತ್ಯ ಸಂಚರಿಸಲು ಕಷ್ಟಪಡಬೇಕಾಗಿದೆ.ಎಷ್ಟೋ ಬಾರಿ ಪೊಲೀಸರು ಅಲ್ಲಿ ನಿಲ್ಲುವ ಕೂಲಿಕಾರ್ಮಿಕರಿಗೆ ಪಕ್ಕದಲ್ಲಿ ಸರಿದು ನಿಲ್ಲುವಂತೆ ರಸ್ತೆ ಬಿಟ್ಟು ಪಕ್ಕದಲ್ಲಿರುವಂತೆ ತಿಳಿಸಿದರೂ ಯಾವುದೇ ಉಪಯೋಗವಾಗಿಲ್ಲ.ಟ್ರಾಫಿಕ್ ಸಮಸ್ಯೆ ಸರಿಪಡಿಸುವಂತೆ ಸಂಸ್ಥೆಯ ಪದಾಧಿಕಾರಿಗಳು ಮಾಡಿದ ಮನವಿಗೆ ಸ್ಪಂದಿಸಿದ ಐಜಿಪಿ ಅವರು, ಈ ಬಗ್ಗೆ ಎಸ್ಪಿ ಅವರಿಗೆ ತಿಳಿಸಲಾಗುವುದು.ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಸಮಸ್ಯೆ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ,ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ, ಸಿಪಿಐ ಮೊಹ್ಮದಫಸಿವುದ್ದೀನ್,ಜನಸೇವಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ವಾಯ್.ದಫೇದಾರ,ಖಜಾಂಚಿ ಹಣಮಂತ ನಲವಡೆ,ಪತ್ರಕರ್ತ ಅನೀಲಕುಮಾರ ತೇಲಂಗಿ,ಮುಖAಡ ಶ್ರೀಶೈಲ ಮೇಟಿ,ಅಪ್ಪು ನಾಡಗೌಡ ಮೊದಲಾದವರು ಇದ್ದರು.







