Mantralayam: Saptaratrotsava celebrations at Mantralaya

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

Mantralayam: ಮಂತ್ರಾಲಯದಲ್ಲಿ ಸಪ್ತರಾತ್ರೋತ್ಸವ ಸಡಗರ ಸಂಭ್ರಮ PHOTOS

ರಾಯಚೂರು: ಮಂತ್ರಾಲಯದ (Mantralayam) ಶ್ರೀರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವಕ್ಕೆ ಶ್ರೀಮಠದಲ್ಲಿ ಅದ್ಧೂರಿ ಚಾಲನೆ ದೊರೆಯಿತು.

ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ರಾಯರ ಬೃಂದಾವನ ಕ್ಕೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ (Mantralayam) ಮಂಚಾಲಮ್ಮಗೆ ನಮಿಸಿ ಪ್ರಾಕಾರದ ಮುಖ್ಯದ್ವಾರದ ಮುಂದೆ ಸಕಲ ಧಾರ್ಮಿಕ ವಿಧಿ ವಿಧಾನದ ಮೂಲಕ ಗೋಪೂಜೆ, ಅಶ್ವಪೂಜೆ, ಒಂಟೆಗಳ ಪೂಜೆ ನೆರವೇರಿಸಿ ಭಗವಾ ಧ್ವಜಾರೋಹಣ ನೆರವೇರಿಸಿ ಸಪ್ತರಾತ್ರೋತ್ಸವಕ್ಕೆ ಮುನ್ನುಡಿ ಹಾಕಿದರು.

ಈಗಾಗಲೇ ಮಠದಲ್ಲಿ ಸೇವೆ ಕೈಗೊಳ್ಳಲು ನೂರಾರು ಸ್ವಯಂ ಸೇವಕರ ಭಕ್ತರ ದಂಡು ಸಹ ಆಗಮಿಸಿದ್ದು ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿಯ ನಿನಾದದ ನಡುವೆ ವೇದ ಮಂತ್ರಗಳೊಂದಿಗೆ ಚಂಡೆ ಮದ್ದಳೆ ಸೇರಿದಂತೆ ಮಂಗಳ ವಾದ್ಯಗಳ ನಿನಾದದಲ್ಲಿ ಚಿನ್ನ, ಬೆಳ್ಳಿ, ನವರತ್ನ ಖಚಿತ ರಥಗಳನ್ನು ಶೃಂಗರಿಸಿ ಸಿದ್ಧಪಡಿಸಿ ಪ್ರಹ್ಲಾದ ರಾಜರ ಉತ್ಸವಕ್ಕೆ ಸಕಲ ಸಿದ ಪೂರ್ಣಗೊಳಿಸಲಾಗಿದೆ.

ನಂತರ ಪ್ರಹ್ಲಾದರಾಜರ ಪಲ್ಲಕ್ಕಿ ಉತ್ಸವ ಮತ್ತು ಧ ಪೂಜೆ ನಡೆಯಿತು. ಇದಾದ ಬಳಿಕ ಬೃಂದಾವನದ ಪ್ರಾಂಗಣದಲ್ಲಿ ಪ್ರಹ್ಲಾದರಾಯರ ಚಿನ್ನದ ರಥೋತ್ಕ ಜರುಗಿತು. ಮಠದ ಮುಂಭಾಗದ ಲ್ಲಿರುವ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರ ಗಳಲ್ಲಿ ದಾಸವಾಣಿ, ನೃತ್ಯ ರೂಪಕಗಳು ಜರುಗಿದವು.

ಪ್ರತಿವರ್ಷ ಮಧ್ಯಾರಾಧನೆ ದಿನ ಬೆಳಿಗ್ಗೆ ತಿರುಪತಿ ತಿರುಮಲ ದೇವಸ್ಥಾನದಿಂದ ಆಗಮಿಸುವ ಶೇಷ ಈ ಬಾರಿ ಮುಂಚೆಯೇ ಆಗಮಿಸಿದ್ದಕ್ಕೆ ಯಾವುದೆ ವಿಶೇಷ ಕಾರಣವಿಲ್ಲ. ಮಧ್ಯಾರಾಧನೆ ದಿನ ಹೆಚ್ಚಿನ ಕೆಲಸಗಳು ಮತ್ತು ನೂಕುನುಗ್ಗಲು ಇರುವುದರಿಂದ ಮುಂಚೆಯೇ ಶೇಷ ವಸ್ತ್ರವನ್ನು ಟಿಟಿಡಿ ಕಳುಹಿಸಿದೆ ಎಂದು ಮಠದ ಮೂಲಗಳು ತಿಳಿಸಿವೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ