Many measures for social security of unorganized sector workers: Minister Lad

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು.

ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್ ಹಾಲ್ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.

ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ‘ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ’ ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು.

ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೊಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ 59,493 ಕಾರ್ಮಿಕರು ನೊಂದಣಿಯಾಗಿದ್ದು ಅವರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಇಂತಹ ಅಸಂಘಟಿತ ಕಾರ್ಮಿಕರ ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗದಾತರು, ಉದ್ದಿಮೆದಾರರು ಉದ್ಯೋಗ ನೀಡಿದಲ್ಲಿ ಶೇ.50 ರಷ್ಟು ವೇತನ ಕಾರ್ಮಿಕ ಇಲಾಖೆಯಿಂದಲೇ ಭರಿಸಲಾಗುವುದೆಂದರು.

ಮೋಟಾರು ಸಾರಿಗೆ ಹಾಗೂ ಸಂಬಂಧಿತ ಕಾರ್ಮಿಕರಿಗೆ ಮತ್ತು ಸಿನಿ ಪರದೆ ಹಿಂದೆ ದುಡಿಯುವ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿದ ಕಾರ್ಮಿಕರಿಗೆ, ಕಲಾವಿದರಿಗೆ, ಸಾಮಾಜಿಕ ಭದ್ರತೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ) ಅಧಿನಿಯಮ ರೂಪಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ದೇಶದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಬದಲಾವಣೆ ತರಲು ಸರ್ಕಾರ ಪಂಚಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ.ಪ್ರತಿ ವರ್ಷ 60 ಸಾವಿರ ಕೋ ರೂ ಗಳಂತೆ ಒಟ್ಟು 5 ವರ್ಷದಲ್ಲಿ 5 ಲಕ್ಷ.ಕೋ.ರೂ ಒದಗಿಸುತ್ತಿದೆ. ಅಭಿವೃದ್ಧಿ, ಯೋಜನೆ, ಯೋಜನೆತರ, ಪೆನ್ಷನ್ ಯೋಜನೆಗಳಿಗೂ ಅನುದಾನ ಒದಗಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರ್ ಕ್ಯಾಪಿಟಾ ಇನ್ಕಮ್ ಹಾಗೂ ಜಿಡಿಪಿ ಯಲ್ಲಿ ರಾಷ್ಟ್ರ ದಲ್ಲಿ ಮುಂಚೂಣಿ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.500 ಕೋ.ಜನರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ವಿಶ್ವದ ಏಕೈಕ ರಾಜ್ಯ ಕರ್ನಾಟಕ ವಾಗಿದೆ ಎಂದು ಹೇಳಿದರು.

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ಚಾಚಿ ಅವರಿಗೆ ಮುಖ್ಯ ವಾಹಿನಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ನೋಂದಣಿ ಮಾಡಿಕೊಳ್ಳುವದು ಮುಖ್ಯ ಎಂದ ಅವರು ಈ ಭಾಗದ ಕಾರ್ಮಿಕರ ಮಕ್ಕಳ ಅನುಕೂಲಕ್ಕಾಗಿ ಭೀ.ಗುಡಿಗೆ ವಸತಿ ಶಾಲೆಯೊಂದು ಮಂಜೂರು ಆಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.ಅದರಂತೆ ಈ ಭಾಗದ ಸಮಸ್ಯೆಯಾಗಿರುವ ಕಾರ್ಮಿಕರ ಗುಳೆ ಸಮಸ್ಯೆ ಪರಿಹರಿಸಲು ಎಲ್ಲರೂ ಸಂಘಟಿತರಾಗಿ ಶ್ರಮಿಸುವುದು ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್, ವಿಧಾನ ಪರಿಷತ್ ಸದಸ್ಯ ಶ್ರೀ ತಿಪ್ಪಣ್ಣ ಕಮತನೂರ್, ಶಾಸಕ ಶರಣಗೌಡ ಕಂದಕೂರ ಅವರು ಕಾರ್ಮಿಕ ಸಚಿವ ಶ್ರೀ ಸಂತೋಷ್ ಲಾಡ್ ಅವರು ಕಾರ್ಮಿಕರ ಪರ ಕಾರ್ಯ ವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ವಡಗೇರಾ ಹಾಗೂ ಗುರುಮಠಕಲ್ ಗೆ ಕಾರ್ಮಿಕ ಮಕ್ಕಳಿಗಾಗಿ ವಸತಿ ಶಾಲೆ ಮಂಜೂರು ಮಾಡುವಂತೆ ಸಚಿವರಿಗೆ ಕೋರಿದರು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್,
ಡಿಸಿ ಹರ್ಷಲ್ ಭೋಯರ್,ಜಿ.ಪಂ.ಸಿಇಓ ಲವೀಶ್ ಒರಡಿಯಾ,ಎಸ್.ಪಿ ಪೃಥ್ವಿಕ್ ಶಂಕರ್, ಲಿಡ್ಕರ್ ಸಂಸ್ಥೆ ಅಧ್ಯಕ್ಷ ಮುಂಡರಗಿ ನಾಗರಾಜ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಂಟಿ ಆಯುಕ್ತ ರವಿಕುಮಾರ್, ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ