ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ