ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ