ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ