ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಇದೇ 14ರಂದು MGVC ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ; ಈಗಲೇ ಹೆಸರು ನೋಂದಾಯಿಸಿಕೊಳ್ಳಲು ಹೀಗೆ ಮಾಡಿ..

ಮುದ್ದೇಬಿಹಾಳ : ಎಂ.ಜಿ.ವಿ.ಸಿ ಕಾಲೇಜು ಹಾಗೂ ಧಾರವಾಡದ ಲಾಜಿಕ್ ಕಂಪ್ಯೂಟರ್ ಸೆಂಟರ್ ಸಹಯೋಗದಲ್ಲಿ ಆ.14 ರಂದು ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ (job fair) ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಜಂಟಿ ಆಯೋಜಕ ಧಾರವಾಡದ ಮಹೇಶ ಭಟ್ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನಲ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮೇಳದ ಮಾಹಿತಿ ನೀಡಿದರು.

Join Our Telegram: https://t.me/dcgkannada

ಬೆಂಗಳೂರು, ಮೈಸೂರು ಮೊದಲಾದ ಮಹಾನಗರಗಳಲ್ಲಿ ಆಯಾ ಕಾಲೇಜು, ಶಿಕ್ಷಣ ಸಂಸ್ಥೆಗಳು ತಮ್ಮ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜಿಸುತ್ತಿವೆ. ಆದರೆ ಅವುಗಳು ಉತ್ತರ ಕರ್ನಾಟಕ ಭಾಗದಲ್ಲಿರುವ ಕಾಲೇಜುಗಳಲ್ಲಿ ಮೇಳಗಳನ್ನು ಆಯೋಜಿಸುವುದಿಲ್ಲ. ಇದನ್ನು ಮನಗಂಡು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಉತ್ತಮ ಕೆಲಸ ದೊರೆಯಬೇಕು ಎಂಬ ಉದ್ದೇಶದಿಂದ ಈ ಮೇಳವನ್ನು (job fair) ಆಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ,ಸ್ನಾತಕೋತ್ತರ ಪದವಿ ಪಡೆದಿರುವ ನಿರುದ್ಯೋಗಿ ವಿದ್ಯಾವಂತ ಯುವಕ/ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗಿದೆ.ದೇಶದ ಪ್ರಮುಖ ಕಂಪನಿಗಳಾದ ಟಾಟಾ, ಹೋಂಡಾ, ಮಾರ್ಕಪೋಲೋ, ಟೋಯೋಟಾ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿವೆ ಎಂದು ತಿಳಿಸಿದರು.

ವಿವಿಧ ಕಂಪನಿಗಳಲ್ಲಿ ಖಾಲಿ ಇರುವ ಸುಮಾರು 1500 ಉದ್ಯೋಗಗಳು ಖಾಲಿ ಇದ್ದು ಅವುಗಳ ಭರ್ತಿಗೆ ಮೇಳದಲ್ಲಿ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಸಂದರ್ಶನ, ಆಯ್ಕೆಯಾದವರಿಗೆ ಉದ್ಯೋಗಪತ್ರ ವಿತರಿಸಲಿದ್ದಾರೆ. ಈಗಾಗಲೇ ರಾಜ್ಯದ 110 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಸಲಾಗಿದ್ದು 40 ಸಾವಿರಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಮುದ್ದೇಬಿಹಾಳದ ಮೇಳಕ್ಕೆ (job fair) 300ಕ್ಕೂ ಹೆಚ್ಚು ಜನ ಹೆಸರು ನೋಂದಾಯಿಸಿದ್ದಾರೆ ಎಂದರು.

ಇದನ್ನೂ ಓದಿ: Suicide: ನಾಗರ ಪಂಚಮಿಯಂದು ದುರಂತ.. ನೇಣಿಗೆ ಶರಣಾದ ಪ್ರೇಮಿಗಳು!

ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ ಮಾತನಾಡಿ, ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಅತೀ ದೊಡ್ಡ ಉದ್ಯೋಗ ಮೇಳ ಇದಾಗಿದ್ದು ಗಂಗಮ್ಮನವರ ಆಶೀರ್ವಾದದಿಂದ ಇಂದು ಸಾವಿರಾರು ವಿದ್ಯಾರ್ಥಿಗಳು ದೇಶದ ಹಲವು ಕಡೆಗಳಲ್ಲಿ ಒಳ್ಳೆಯ ಉದ್ಯೋಗಗಳಲ್ಲಿದ್ದಾರೆ. ಉದ್ಯೋಗ ಮೇಳಕ್ಕೆ 3000ಕ್ಕೂ ಅಧಿಕ ಜನ ಬರುವ ಸಾಧ್ಯತೆ ಇದೆ ಎಂದರು.

ಮೇಳದಲ್ಲಿ ಭಾಗವಹಿಸಲು ಇಚ್ಛಿಸುವರು ಮೊ.7829529043, ಪ್ರಾಚಾರ್ಯ ಎಸ್.ಎನ್.ಪೊಲೇಶಿ 9035103184ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಿವರಾಜ ತಡಸದ,ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ, ಪ್ರೊ.ಎಂ.ಆಯ್.ಬಿರಾದಾರ,ಎ.ಎ.ಮುಲ್ಲಾ, ರಹೀಂ ಮುಲ್ಲಾ, ಶ್ರೀಶೈಲ ಹತ್ತಿ, ಎ.ಎಸ್.ಬಾಗವಾನ, ಎಸ್.ಎಂ.ನಿಂಬಲಗುಂದಿ, ಮೊದಲಾದವರು ಇದ್ದರು.

ಈಗಾಗಲೇ ಹೆಸರು ನೋಂದಾಯಿಸಿಕೊಳ್ಳಲು ಈ ಕೆಳಗಿನ ಕ್ಯೂ ಆರ್ ಕೋಡ್ ಬಳಸಿ…

ಉದ್ಘಾಟನೆ :ಉದ್ಯೋಗ ಮೇಳದ ಉದ್ಘಾಟನೆ ಆ.14 ರಂದು ಬೆಳಗ್ಗೆ 9.30ಕ್ಕೆ ಕಾಲೇಜಿನ ಆವರಣದಲ್ಲಿ ಮೇಳದ ಉದ್ಘಾಟನೆ ಹಮ್ಮಿಕೊಳ್ಳಲಾಗಿದ್ದು, ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಶ್ರೀ ದಿವ್ಯ ಸಾನಿಧ್ಯ ವಹಿಸುವರು. ಶಾಸಕ, ಕೆ.ಎಸ್.ಡಿ.ಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಎಸ್.ಜಿ.ವಿ.ಸಿ ಟ್ರಸ್ಟ್ ಅಧ್ಯಕ್ಷ ಸತೀಶ ಜಿಗಜಿನ್ನಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಎಸ್.ಜಿ.ವಿ.ಸಿ ಟ್ರಸ್ಟ್ ಕಾರ್ಯದರ್ಶಿ ಅಶೋಕ ತಡಸದ,ಟ್ರಸ್ಟ್ ಸದಸ್ಯರಾದ ಜಯಲಕ್ಷ್ಮಿ ಬಗಲಿ, ಎಲ್.ಸಿ.ಸಿ ನಿರ್ದೇಶಕ ಮಹೇಶ ಭಟ್, ಆಡಳಿತಾಧಿಕಾರಿ ಎ.ಬಿ.ಕುಲಕರ್ಣಿ ಉಪಸ್ಥಿತರಿರುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು