Massive protest by JDS party: Appeal to the governor to dismiss the Congress government

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿತು.

ಪಕ್ಷದ ಮುಖಂಡ ಬಸನಗೌಡ ಪಾಟೀಲ ಹಿರೇಮುರಾಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ದುರಾಡಳಿತದಲ್ಲಿ ತೊಡಗಿದೆ. ದೈನಂದಿನ ವಸ್ತುಗಳ ಬೆಲೆ ಗಗನಕ್ಕೇರಿದ್ದು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ನೀರಾವರಿಗಾಗಿ ಒಂದು ನಯಾಪೈಸೆ ಅನುದಾನ ಈ ಸರ್ಕಾರದಿಂದ ಕೊಡಲು ಸಾಧ್ಯವಾಗಿಲ್ಲ ಎಂದು ದೂರಿದರು.

ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಹೆಸರಿನ ಮೇಲೆ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಾ ಸಾಗಿದೆ. ವಸತಿ ಹಗರಣ, ವಾಲ್ಮೀಕಿ ನಿಗಮದಲ್ಲಿ ಹಗರಣ, ಅಬಕಾರಿ ಇಲಾಖೆಯಲ್ಲಿ ಹಗರಣ ಸೇರಿದಂತೆ ಹಲವು ಹಗರಣಗಳಲ್ಲಿ ಸಿಲುಕಿ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕು ಅಧ್ಯಕ್ಷ ಪವಾಡೆಪ್ಪ ಹವಾಲ್ದಾರ ಮಾತನಾಡಿದರು. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸೆಯ್ಯದ ಸಾತಿಹಾಳ, ಕಾರ್ಯದರ್ಶಿ ಅಜರುದ್ದೀನ್ ಮುಲ್ಲಾ, ಜಿಲ್ಲಾ ಉಪಾಧ್ಯಕ್ಷ ಬಸವಂತ್ರಾಯ ದೇಸಾಯಿ, ಲಾಳೇಮಶ್ಯಾಕ ನಾಯ್ಕೋಡಿ(ಬುಡ್ಡಾ), ತಾಲೂಕಾ ಪ್ರಧಾನ ಕಾರ್ಯದರ್ಶಿ ಮೋತಿಲಾಲ ಮ್ಯಾಗೇರಿ, ತಾಲೂಕಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬ್ದುಲ್‌ ಮಜೀದ್ ಶಿರೋಳ, ಅನ್ವರಸಾಬ ಟಕ್ಕಳಕಿ, ತಾಲೂಕಾ ಕಾರ್ಯದರ್ಶಿ ಅಶೋಕ ಅಮರಣ್ಣವರ, ಸಂಗಣ್ಣ ದೇಸಾಯಿ (ಬಳಗಾನೂರ), ಶರಣಗೌಡ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.

ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಸಲ್ಲಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ