Massive tractor protest led by BJP state vice-president Raju Gaudru

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ್ರು ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ್ರು ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ

ಶಿವು ರಾಠೋಡ, ಹುಣಸಗಿ : ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ.

ಹುಣಸಗಿ ಪಟ್ಟಣದಿಂದ ನಾರಾಯಣಪುರು ಮುಖ್ಯಇಂಜಿನಿಯರ್ ಆಫೀಸ್ ವರೆಗೆ ಪ್ರತಿಭಟನೆ. ಈ ಪ್ರತಿಭಟನೆಯು ಬೆಳಗ್ಗೆ 10.30 ಗಂಟೆಗೆ ಪ್ರಾರಂಭಿಸಿದರು.

ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳ ಬಗ್ಗೆ ಘೋಷಣೆ ಕೂಗಿದರು. ಬೇಕೆ ಬೇಕು ಏ.10 ರವರೆಗೆ ಕಾಲುವೆಗೆ ನೀರು ಬೇಕು… ಎಂಬ ಘೋಷಣೆ ಮೊಳಗಿತು. ಬಳಿಕ ಪ್ರತಿಭಟನೆಯಲ್ಲಿ ರೈತ ಮುಖಂಡರು ಮಾತನಾಡಿ, ನಾರಾಯಣಪುರ ಎಡದಂಡೆ ಕಾಲುವೆಯ ಅವಲಂಬಾನೆಯ ರೈತರಿಗೆ ಅನ್ಯಾಯ ಮಾಡಬೇಡಿ ನಿಮ್ಮನ ನಂಬಿ ರೈತರರು ಶೇಂಗಾ, ಸಜ್ಜೆ, ಸೂರ್ಯಕಾಂತಿ, ಭತ್ತ ಸೇರಿ ಇನ್ನಿತರ ಬೆಳೆಗಳು ಇನ್ನೂ 20 ರಿಂದ25 ದಿನಗಳಲ್ಲಿ ಕೈಗೆ ಬರುತ್ತವೆ. ಆದರೆ ತೆನೆ ಬರುವ ಸಂದರ್ಭದಲ್ಲಿ ಏಕಾಏಕಿ ಕಾಲುವೆ ನೀರು ನಿಂತು ಹೋದರೆ ರೈತರ ಲಕ್ಷಾಂತರ ಮೊತ್ತದ ಬೆಳೆ ನಷ್ಟವಾಗಿ ಅವರ ಬಾಳು ಕೂಡ ಹಾಳಾಗುತ್ತದೆ ಎಂದು ಹೇಳಿದರು.

ಕೃಷಿ ಇಲಾಖೆಯು ಬೆಳೆಗಳ ವಾಸ್ತವ ಸ್ಥಿತಿಯನ್ನು ಸರಕಾರಕ್ಕೆ ವರದಿ ಮಾಡಿದೆ. ನೀರಾವರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಸಂಗ್ರಹವಿದ್ದ ಅದೇಷ್ಟೋ ಟಿಎಂಸಿ ನೀರು ನದಿಗೆ ಹೋಗಿದೆ ಎಂದು ಆಕ್ರೋಶ ಹೊರ ಹಾಕಿದರು. ನೀರಾವರಿ ಸಲಹಾ ಸಮಿತಿಯವರ ಅವೈಜ್ಞಾನಿಕ ತಿರ್ಮಾನ, ತೆಲಂಗಾಣ ರಾಜ್ಯಕ್ಕೆ ರಾತೋರಾತ್ರಿ ನೀರು ಹರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಹರಿ ಹಾಯ್ದರು.

ಏ.10 ರವರೆಗೆ ಕಾಲುವೆಗೆ ನೀರು ಹರಿಸದಿದ್ದರೆ ರೈತರು ಬೆಳೆ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸರಕಾರವೇ ಜವಾಬ್ದಾರಿಯಾಗುತ್ತದೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಕಾರಣ ಸರಕಾರ ರೈತರ ಹಿತ ಕಾಪಾಡಬೇಕಾಗಿರುವುದು ಅಗತ್ಯವಾಗಿದೆ.

ಈಗ ರೈತರಿಗೆ ಬಂದಿರುವ ಸಂಕಷ್ಟ ನಿವಾರಿಸಬೇಕು. ಕುಡಿಯಲು ಅವಶ್ಯವಿರುವ 24 ಟಿಎಂಸಿ ನೀರು ಇದೆ. ಹಾಗಾಗಿ ಏ.10 ವರೆಗೆ ಕಾಲುವೆಗೆ ನೀರು ಹರಿಸಿ ರೈತರ ಬೆಳೆ, ಬಾಳು ಉಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಬ್ಲುಗೌಡ, ಅಮಿನ ರೆಡ್ಡಿ ಯಾಳಗಿ, ಬಸನಗೌಡ, ಹನಮಂತ ನಾಯಕ್ ತಾತಾ, ಹೆಚ್ ಸಿ ಪಾಟೀಲ್, ಯಲ್ಲಪ್ಪ ಕುರಕುಂಡಿ, ಶೇಖರ್ ಎಸ್ ನಾಯಕ, ತಿರುಪತಿ ಹೆಚ್ ನಾಯಕ, ಸಂಗಣ್ಣ ವೈಲಿ, ವೆಂಕಟೇಶ ಸಾಹುಕಾರ್, ಶಿವಣ್ಣ ಮಂಗಿಹಾಳ್, ರಮೇಶ ಕೋಲೂರು, ಶಿವು ಬಿರಾದಾರ, ಅನೇಕ ಸಂಘಟನೆಪರ ಹೋರಾಟಗಾರರು , ರೈತರ ಪರ ಹೊರಟಗಾರರು ಉಪಸ್ಥಿತರಿದ್ದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ