ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ ಇತರೆ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ಪಾಲಕರಿಗೆ ತಿಳಿಸಬೇಕು ಈ ಮೂಲಕ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ ಹೆಚ್ಚಿಸುವ ಬಗ್ಗೆ ಸಭೆಯಲ್ಲಿದ್ದ ಪ್ರಧಾನ ಗುರುಗಳಿಗೆ ಮಾಹಿತಿ ನೀಡಲಾಯಿತು, ಶೈಕ್ಷಣಿಕ ವರ್ಷದಲ್ಲಿ ಹಮ್ಮಿಕೊಳ್ಳಬೇಕಾದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಶಿಕ್ಷಣ ಸಂಯೋಜಕ ಶರಣಬಸವ ಗಚ್ಚಿನಮನಿ, ಬಿ.ಆರ್.ಪಿ ಮಹಮದ್ ರಫೀಕ್ ಮಳ್ಳಿಕರ್, ಮುಖ್ಯಶಿಕ್ಷಕ ಶರಣಪ್ಪ, ಕೊಟ್ರೇಶ್ ಕೋಳೂರು, ಹಸನಸಾ ಚೌದ್ರಿ, ಗದ್ಯಪ್ಪ ನಾಯಕ್, ತಿಪ್ಪಮ್ಮ ಗೊರೆಬಾಳ, ಬಿ.ಇ.ಆರ್.ಟಿ ಓಂಪ್ರಕಾಶ್, ಸಿಆರ್ಪಿ ಪರಶುರಾಮ ಸೇರಿ ವಲಯ ವ್ಯಾಪ್ತಿಯ ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಕೊಡೇಕಲ್ ವಲಯದ ಸಿಆರ್ಪಿಗಳು ಉಪಸ್ಥಿತರಿದ್ದರು.