Memoirs of Basapriya Appanna: Kulavrti is not derogatory - R.B. Thimmapura

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು.

ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನುಷ್ಯನಿಗೂ ಸ್ವಾಭಿಮಾನ ಮುಖ್ಯವಾಗಿದ್ದು ಒಬ್ಬರ ಮನಸ್ಸಿಗೆ ನೋವಾಗುವಂತೆ ಮಾತನಾಡಬಾರದು. ಹಡಪದ ಜನಾಂಗ ಆರ್ಥಿಕವಾಗಿ ಬೆಳವಣಿಗೆ ಹೊಂದಲು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಲಿಂ. ಬಸವಪ್ರಿಯ ಅಪ್ಪಣ್ಣನವರ ಗದ್ದುಗೆಯನ್ನು ದೇವಸ್ಥಾನವನ್ನಾಗಿ ಅಭಿವೃದ್ಧಿಪಡಿಸಲು ವಯಕ್ತಿಕವಾಗಿ ಒಂದು ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ದಾನ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿದ್ಧರಾಮಯ್ಯನವರ ಅವಧಿಯಲ್ಲಿ ಹಡಪದ ಅಪ್ಪಣ್ಣ ಗುರುಪೀಠದ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹಡಪದ ಸಮಾಜದ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಹಡಪದ ಅಪ್ಪಣ್ಣನವರನ್ನು ಬಸವಣ್ಣನವರು ತಮ್ಮ ಕಾರ್ಯದರ್ಶಿಗಳಾಗಿ ಮಾಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ತಂಗಡಗಿಯನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ ಮಠದ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯಕ್ಷ ಎಂ.ಎಸ್.ನಾವಿ, ನೌಕರರ ಸಂಘದ ಪ್ರಕಾಶ ಹಡಪದ, ಜಿಲ್ಲಾಧ್ಯಕ್ಷ ವಿ.ಜಿ.ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ಸಿ.ಎಫ್.ನಾವಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ ಮೊದಲಾದವರು ಇದ್ದರು.

ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ