Memoirs of Basapriya Appanna: Kulavrti is not derogatory - R.B. Thimmapura

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು.

ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನುಷ್ಯನಿಗೂ ಸ್ವಾಭಿಮಾನ ಮುಖ್ಯವಾಗಿದ್ದು ಒಬ್ಬರ ಮನಸ್ಸಿಗೆ ನೋವಾಗುವಂತೆ ಮಾತನಾಡಬಾರದು. ಹಡಪದ ಜನಾಂಗ ಆರ್ಥಿಕವಾಗಿ ಬೆಳವಣಿಗೆ ಹೊಂದಲು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಲಿಂ. ಬಸವಪ್ರಿಯ ಅಪ್ಪಣ್ಣನವರ ಗದ್ದುಗೆಯನ್ನು ದೇವಸ್ಥಾನವನ್ನಾಗಿ ಅಭಿವೃದ್ಧಿಪಡಿಸಲು ವಯಕ್ತಿಕವಾಗಿ ಒಂದು ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ದಾನ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿದ್ಧರಾಮಯ್ಯನವರ ಅವಧಿಯಲ್ಲಿ ಹಡಪದ ಅಪ್ಪಣ್ಣ ಗುರುಪೀಠದ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹಡಪದ ಸಮಾಜದ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಹಡಪದ ಅಪ್ಪಣ್ಣನವರನ್ನು ಬಸವಣ್ಣನವರು ತಮ್ಮ ಕಾರ್ಯದರ್ಶಿಗಳಾಗಿ ಮಾಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ತಂಗಡಗಿಯನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ ಮಠದ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯಕ್ಷ ಎಂ.ಎಸ್.ನಾವಿ, ನೌಕರರ ಸಂಘದ ಪ್ರಕಾಶ ಹಡಪದ, ಜಿಲ್ಲಾಧ್ಯಕ್ಷ ವಿ.ಜಿ.ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ಸಿ.ಎಫ್.ನಾವಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ ಮೊದಲಾದವರು ಇದ್ದರು.

ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ