Memoirs of Basapriya Appanna: Kulavrti is not derogatory - R.B. Thimmapura

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಬಸಪ್ರಿಯ ಅಪ್ಪಣ್ಣನವರ ಸ್ಮರಣೆ : ಕುಲವೃತ್ತಿ ಅವಹೇಳನ ಸಲ್ಲದು- ಆರ್.ಬಿ.ತಿಮ್ಮಾಪುರ

ಮುದ್ದೇಬಿಹಾಳ : ಕುಲಕಸುಬು ಮಾಡುವವರನ್ನು ಸಮಾನತೆಯಿಂದ ಸಮಾಜ ಈವರೆಗೂ ಕಾಣುತ್ತಿಲ್ಲ. ಸಣ್ಣ ಸಮಾಜದವರನ್ನು ತುಳಿಯುತ್ತಾರೆ. ಅವರನ್ನು ಮುಖ್ಯವಾಹಿನಿಗೆ ತರಬೇಕು. ಸಣ್ಣ ಸಣ್ಣ ಸಮಾಜಗಳು ಒಕ್ಕೂಟ ರಚಿಸಿಕೊಂಡು ಒಗ್ಗಟ್ಟಾಗಬೇಕು ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಅವರು ಹೇಳಿದರು.

ತಾಲ್ಲೂಕಿನ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಗುರುಪೀಠದಲ್ಲಿ ಸಮಾಜದ ಪ್ರಥಮ ಗುರು ಲಿಂ.ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿಯವರ 17ನೇ ಪುಣ್ಯಸ್ಮರಣೆ ಹಾಗೂ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿ ಮನುಷ್ಯನಿಗೂ ಸ್ವಾಭಿಮಾನ ಮುಖ್ಯವಾಗಿದ್ದು ಒಬ್ಬರ ಮನಸ್ಸಿಗೆ ನೋವಾಗುವಂತೆ ಮಾತನಾಡಬಾರದು. ಹಡಪದ ಜನಾಂಗ ಆರ್ಥಿಕವಾಗಿ ಬೆಳವಣಿಗೆ ಹೊಂದಲು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಲಿಂ. ಬಸವಪ್ರಿಯ ಅಪ್ಪಣ್ಣನವರ ಗದ್ದುಗೆಯನ್ನು ದೇವಸ್ಥಾನವನ್ನಾಗಿ ಅಭಿವೃದ್ಧಿಪಡಿಸಲು ವಯಕ್ತಿಕವಾಗಿ ಒಂದು ಲಕ್ಷ ರೂ. ಅನುದಾನ ನೀಡುವುದಾಗಿ ವಾಗ್ದಾನ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಸಿದ್ಧರಾಮಯ್ಯನವರ ಅವಧಿಯಲ್ಲಿ ಹಡಪದ ಅಪ್ಪಣ್ಣ ಗುರುಪೀಠದ ಅಭಿವೃದ್ಧಿಗೆ ಒಂದು ಕೋಟಿ ರೂ.ಅನುದಾನ ಒದಗಿಸಲಾಗಿದೆ. ಹಡಪದ ಸಮಾಜದ ಏಳ್ಗೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಮಾತನಾಡಿ, ಹಡಪದ ಅಪ್ಪಣ್ಣನವರನ್ನು ಬಸವಣ್ಣನವರು ತಮ್ಮ ಕಾರ್ಯದರ್ಶಿಗಳಾಗಿ ಮಾಡಿಕೊಂಡು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ತಂಗಡಗಿಯನ್ನು ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್ ಚಿತ್ತರಗಿ ವಿಜಯ ಮಹಾಂತೇಶ ಮಠದ ಗುರುಮಹಾಂತ ಸ್ವಾಮೀಜಿ, ಚಿತ್ರದುರ್ಗದ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮೀಜಿ, ಟ್ರಸ್ಟ್ನ ಗೌರವಾಧ್ಯಕ್ಷ ಎಂ.ಎಸ್.ನಾವಿ, ನೌಕರರ ಸಂಘದ ಪ್ರಕಾಶ ಹಡಪದ, ಜಿಲ್ಲಾಧ್ಯಕ್ಷ ವಿ.ಜಿ.ಕತ್ನಳ್ಳಿ, ನಿಂಗಪ್ಪ ನಾವಿ, ಮಹಾಂತೇಶ ಮೂಲಿಮನಿ, ಸಿ.ಎಫ್.ನಾವಿ, ನಾಗೇಶ ನಾಗೂರ, ಓಂಕಾರ ನಾವಿ, ಸೋಮನಗೌಡ ಪಾಟೀಲ ನಡಹಳ್ಳಿ ಮೊದಲಾದವರು ಇದ್ದರು.

ಎಸ್.ಎಸ್.ಎಲ್.ಸಿ.,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ