Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ