Menstrual leave with pay in the state too

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ – 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ ಫಲ ದೊರೆತಿದೆ‌.

ಈ ನೀತಿಯ ಜಾರಿಯೊಂದಿಗೆ ಪ್ರತಿತಿಂಗಳು ಋತು ಚಕ್ರದ ಅವಧಿಯಲ್ಲಿ ವೇತನ ಸಹಿತ ಒಂದು ದಿನದ ರಜೆ ಎಲ್ಲ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ‌ ಕೆಲಸ ಮಾಡುತ್ತಿರುವ ರಾಜ್ಯದ ಮಹಿಳೆಯರಿಗೆ ಸಿಗಲಿದೆ. ಈ ಮೂಲಕ ವರ್ಷಕ್ಕೆ 12 ವೇತನ ಸಹಿತ ರಜೆ ಸಿಕ್ಕಂತಾಗುತ್ತದೆ.

ಮೊದಲಿಂದಲೂ ಕೆಲಸ ಮಾಡುವ ಮಹಿಳೆಯರಿಗೆ, ಮಹಿಳಾ ಕಾರ್ಮಿಕರಿಗೆ ನೆರವಾಗುವ ಹಲವು ಯೋಜನೆಗಳನ್ನು ಕಾರ್ಮಿಕ ಇಲಾಖೆಯ ಮೂಲಕ ರೂಪಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಹಿರಿಮೆಗೆ ಮತ್ತೊಂದು ಗರಿ ಮೂಡಿದೆ. ಇಂದು ಈ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದರ ಹಿಂದೆ ಸಚಿವ ಸಂತೋಷ್ ಲಾಡ್ ಅವರ ಅಪಾರ ಶ್ರಮವಿದೆ.

ಬೇರೆ ಬೇರೆ ರಾಜ್ಯಗಳಲ್ಲಿ, ದೇಶಗಳಲ್ಲಿ ಈ ವಿಷಯದಲ್ಲಿರುವ ರಜೆ ನೀತಿಗಳನ್ನೆಲ್ಲ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಸಂತೋಷ್ ಲಾಡ್ ಅವರು ಕರ್ನಾಟಕದಲ್ಲೂ ಈ ನೀತಿ ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಂಡಿದ್ದಾರೆ. ಸರ್ಕಾರಿ ವಲಯದಷ್ಟೇ ಅಲ್ಲದೇ ಖಾಸಗಿ ವಲಯದ ಮಹಿಳಾ ಉದ್ಯೋಗಿಗಳಿಗೂ ಈ ನೀತಿಯ ಲಾಭ ಸಿಗಲಿದೆ. ಈಗಾಗಲೇ ಖಾಸಗಿ ವಲಯದ ಹಲವು ಸಂಸ್ಥೆಗಳು ರಾಜ್ಯ ಸರ್ಕಾರದ ಈ ನೂತನ ನೀತಿಗೆ ಒಮ್ಮತ ತೋರಿವೆ. ಇನ್ನಷ್ಟು ಸಂಸ್ಥೆಗಳಿಗೆ ಈ ಬಗ್ಗೆ ಕ್ರಮ ವಹಿಸುವಂತೆ ಮಾತುಕತೆ ನಡೆಸಲಾಗುತ್ತಿದೆ‌.

ಒಟ್ಟಿನಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಮ್ಮ ಇಲಾಖೆಯ ಮೂಲಕ ಮಹಿಳಾ ಸಬಲೀಕರಣದ ಜೊತೆ ಅವರ ರಕ್ಷಣೆ, ಸುರಕ್ಷತೆ, ಗೌರವವನ್ನು ಸಹ ಕಾಪಾಡಲು ದೃಢ ಹೆಜ್ಜೆ ಇರಿಸಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗುತ್ತಿದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ