ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ ಇರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಕೂಡಿಸಿದರೆ ಸರ್ಕಾರಕ್ಕೆ ಯಾವುದೇ ರೀತಿಯ ಹಣಕಾಸಿನ ಭಾರವಾಗಲಿ ಅಥವಾ ಸ್ಥಳಾವಕಾಶದ ಕೊರತೆ ಆಗುವುದಿಲ್ಲ.
ಯು.ಜಿ.ಸಿ. ನಿಯಮಾವಳಿಯ ಪ್ರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕೆಂದು ನಿಯಮವಿರುವದರಿಂದ ನಮಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಶ್ವವಿದ್ಯಾಲಯಕ್ಕೆ ಸೇರಿಸುವ ಬದಲು ವಿಜಯಪುರ ಜಿಲ್ಲೆಗೆ ಒಂದು ಪ್ರತ್ಯೇಕವಾದ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ಕಾಲೇಜುಗಳಿಂದ ಈಗಾಗಲೇ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದಾಲಯದಿಂದ ಸಂಯೋಜನಾ ಶುಲ್ಕ, ಠೇವಣಿ ಶುಲ್ಕ, ಕಾಲೇಜು ಮುಂದುವರಿಕೆ ಮತ್ತು ವಿಸ್ತರಣೆ ಶುಲ್ಕ, ಪ್ರವೇಶ ಮಿತಿ ಹೆಚ್ಚಳ ಶುಲ್ಕ ಅಲ್ಲದೇ ವಿದ್ಯಾರ್ಥಿಗಳ ಶುಲ್ಕದಲ್ಲಿ ಕೂಡಾ ಸಾಕಷ್ಟು ವ್ಯತ್ಯಾಸವಿರುತ್ತದೆ. ಹೀಗೆ ಹತ್ತು ಹಲವಾರು ಶುಲ್ಕಗಳ ಭಾರದಿಂದ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲ ಕಾಲೇಜುಗಳು ನಲುಗಿ ಹೋಗಿರುತ್ತವೆ ಎಂದು ತಿಳಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸರ್ಕಾರದ ನಿಯಮಾವಳಿ ಪ್ರಕಾರ ರಾಣಿಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಬಂದವರೇ ವಿನಃ ಇಷ್ಟಪಟ್ಟು ಬಂದಿಲ್ಲ.ಇವತ್ತು ಕೂಡಾ ಕರ್ನಾಟಕ ವಿಶ್ವವಿದ್ಯಾಲಯ ಶುಲ್ಕಕ್ಕೂ ಹಾಗೂ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಶುಲ್ಕಕ್ಕೂ ಅಜಗಜಾಂತರ ವ್ಯತ್ಯಾಸವಿರುವುದನ್ನು ಸರ್ಕಾರ ಗಮನಿಸಬೇಕು ಎಂದು ತಿಳಿಸಿದ್ದಾರೆ.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳೆಯರಿಗಾಗಿಯೇ ಮೀಸಲು ಇರುವುದರಿಂದ ನಿಮ್ಮ ವಿಶ್ವವಿದ್ಯಾಲಯವು ಯಥಾವತ್ತಾಗಿ ಇರಲಿ ಮತ್ತು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಅಡಿಯಲ್ಲಿರುವ ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳು ಅಕ್ಕಮಹಾದೇವಿ ಮಹಿಳಾ ಆಡಳಿತಕ್ಕೆ ಒಳಪಡುವುದರಿಂದ ಮಹಿಳಾ ವಿಶ್ವವಿದ್ಯಾಲಯದ ಆರ್ಥಿಕ ಪರಿಸ್ಥಿಯು ಕೂಡಾ ಉತ್ತಮವಾಗುದಲ್ಲದೆ ನಮ್ಮ ಜಿಲ್ಲೆಯ ಕಾಲೇಜುಗಳಿಗೂ ತುಂಬಾ ಅನುಕೂಲುವಾಗುವುದು. ನಮ್ಮನ್ನು ಯಾಕೆ ಬಾಗಲಕೋಟ ಜಿಲ್ಲೆಯ ಜಮಖಂಡಿ ವಿಶ್ವವಿದ್ಯಾಲಯಕ್ಕೆ ಸೇರಿಸುತ್ತೀರಿ ? ಅದು ಬೇಡವೇ ಬೇಡ ಎಂದು ಒತ್ತಾಯಿಸಿದ್ದಾರೆ.

ಅವಿಭಜಿತ ವಿಜಯಪುರ ಜಿಲ್ಲೆಯು ಬಾಗಲಕೋಟೆ ಒಳಗೊಂಡು ಬಹುದೊಡ್ಡ ಜಿಲ್ಲೆಯಾಗಿತ್ತು ಅದನ್ನು ಈಗ ವಿಭಜಿತವಾದ ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕಿಗೆ ವಿಶ್ವವಿದ್ಯಾಲಯವನ್ನು ನೀಡಲಾಗಿದೆ.ಪುರಾತನ ಇತಿಹಾಸ ಪುಟದಲ್ಲಿ ರಾರಾಜಿಸುವ ಬಹುದೊಡ್ಡ ವಿಜಯಪುರ ಜಿಲ್ಲೆಯನ್ನು ಸರ್ಕಾರ ಮರೆತಿರುವ ಕಾರಣ ವಿಜಯಪುರ ಜಿಲ್ಲೆಯ ರಾಜಕೀಯ ಧುರೀಣರ ಇಚ್ಚಾಶಕ್ತಿಯ ಕೊರತೆಯಿಂದ ಅನ್ಯ ಜಿಲ್ಲೆಯ ವಿವಿ ಅಡಿ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ.ಜಿಲ್ಲಾ ಉಸ್ತುವಾರಿ ಮಂತ್ರಿ ಎಂ.ಬಿ.ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ,ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,ಸಿಂದಗಿಯ ಶಾಸಕ ಅಶೋಕ ಮನಗೂಳಿ ಅವರಿಗೆ ಬರಗಾಲ ಪಿಡಿತವಾದ ವಿಜಯಪುರ ಜಿಲ್ಲೆಯ ಬಡಮಕ್ಕಳ ಶಿಕ್ಷಣಕ್ಕೆ ಎಳ್ಳಷ್ಟು ಕಾಳಜಿ ಇಲ್ಲವಾಗಿದೆ ಎಂದು ದೂರಿದ್ದಾರೆ.

ಪ್ರತ್ಯೇಕ ವಿಶ್ವವಿದ್ಯಾಲಯ ಆಗ್ರಹಕ್ಕೂ ಮುನ್ನ ಮವಿವಿಗೆ ಸೇರ್ಪಡೆ ಮಾಡಿ: ವಿಜಯಪುರ ಜಿಲ್ಲೆ ಎಲ್ಲ ಪದವಿ ಕಾಲೇಜುಗಳ ಆಡಳಿತ ಮಂಡಳಿಯವರು ನಮ್ಮ ಪ್ರತ್ಯೇಕವಾದ ವಿಶ್ವವಿದ್ಯಾಲಯ ಕೊಡಬೇಕೆಂಬ ಕೂಗು ಕೇಳುವ ಪೂರ್ವದಲ್ಲಿಯೇ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಧಾನಸಭೆಯಲ್ಲಿ ನಮ್ಮೆಲ್ಲ ಕಾಲೇಜುಗಳ ಪರವಾಗಿ ದ್ವನಿ ಎತ್ತಬೇಕು ಎಂದು ಸಗರಿ ಆಗ್ರಹಿಸಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,