ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ವಿಜಯಪುರ ಜಿಲ್ಲೆಯ ಕಾಲೇಜುಗಳನ್ನು ಅಕ್ಕಮಹಾದೇವಿ ಮ.ವಿ.ವಿ ಸಂಯೋಜನೆಗೊಳಪಡಿಸಿ-ಎಂ.ಬಿ.ಸಗರಿ

ಮುದ್ದೇಬಿಹಾಳ : ಪ್ರಸ್ತುತ ವಿಜಯಪುರ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾರಹಿತ ಪದವಿ ಕಾಲೇಜುಗಳು ಬೆಳಗಾವಿಯ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಸಂಯೋಜನೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈಗ ವಿಜಯಪುರ ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳನ್ನು ಬಾಗಲಕೋಟಿ ಜಿಲ್ಲೆಯ ಜಮಖಂಡಿಯಲ್ಲಿರುವ ವಿಶ್ವವದ್ಯಾಲಯಕ್ಕೆ ಸೇರಿಸುವ ಬಹಳಷ್ಟು ಹುನ್ನಾರ ನಡೆದಿದೆ ಎಂದು ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳನ್ನು ವಿಜಯಪುರದಲ್ಲಿ ಈಗಾಗಲೇ ಇರುವ ಮಹಿಳಾ ವಿಶ್ವವಿದ್ಯಾಲಯಕ್ಕೆ ಕೂಡಿಸಿದರೆ ಸರ್ಕಾರಕ್ಕೆ ಯಾವುದೇ ರೀತಿಯ ಹಣಕಾಸಿನ ಭಾರವಾಗಲಿ ಅಥವಾ ಸ್ಥಳಾವಕಾಶದ ಕೊರತೆ ಆಗುವುದಿಲ್ಲ.
ಯು.ಜಿ.ಸಿ. ನಿಯಮಾವಳಿಯ ಪ್ರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕೆಂದು ನಿಯಮವಿರುವದರಿಂದ ನಮಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಶ್ವವಿದ್ಯಾಲಯಕ್ಕೆ ಸೇರಿಸುವ ಬದಲು ವಿಜಯಪುರ ಜಿಲ್ಲೆಗೆ ಒಂದು ಪ್ರತ್ಯೇಕವಾದ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯ ಕಾಲೇಜುಗಳಿಂದ ಈಗಾಗಲೇ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದಾಲಯದಿಂದ ಸಂಯೋಜನಾ ಶುಲ್ಕ, ಠೇವಣಿ ಶುಲ್ಕ, ಕಾಲೇಜು ಮುಂದುವರಿಕೆ ಮತ್ತು ವಿಸ್ತರಣೆ ಶುಲ್ಕ, ಪ್ರವೇಶ ಮಿತಿ ಹೆಚ್ಚಳ ಶುಲ್ಕ ಅಲ್ಲದೇ ವಿದ್ಯಾರ್ಥಿಗಳ ಶುಲ್ಕದಲ್ಲಿ ಕೂಡಾ ಸಾಕಷ್ಟು ವ್ಯತ್ಯಾಸವಿರುತ್ತದೆ. ಹೀಗೆ ಹತ್ತು ಹಲವಾರು ಶುಲ್ಕಗಳ ಭಾರದಿಂದ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲ ಕಾಲೇಜುಗಳು ನಲುಗಿ ಹೋಗಿರುತ್ತವೆ ಎಂದು ತಿಳಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸರ್ಕಾರದ ನಿಯಮಾವಳಿ ಪ್ರಕಾರ ರಾಣಿಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಬಂದವರೇ ವಿನಃ ಇಷ್ಟಪಟ್ಟು ಬಂದಿಲ್ಲ.ಇವತ್ತು ಕೂಡಾ ಕರ್ನಾಟಕ ವಿಶ್ವವಿದ್ಯಾಲಯ ಶುಲ್ಕಕ್ಕೂ ಹಾಗೂ ರಾಣಿಚನ್ನಮ್ಮ ವಿಶ್ವವಿದ್ಯಾಲಯದ ಶುಲ್ಕಕ್ಕೂ ಅಜಗಜಾಂತರ ವ್ಯತ್ಯಾಸವಿರುವುದನ್ನು ಸರ್ಕಾರ ಗಮನಿಸಬೇಕು ಎಂದು ತಿಳಿಸಿದ್ದಾರೆ.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳೆಯರಿಗಾಗಿಯೇ ಮೀಸಲು ಇರುವುದರಿಂದ ನಿಮ್ಮ ವಿಶ್ವವಿದ್ಯಾಲಯವು ಯಥಾವತ್ತಾಗಿ ಇರಲಿ ಮತ್ತು ರಾಣಿಚನ್ನಮ್ಮ ವಿಶ್ವವಿದ್ಯಾಲಯ ಅಡಿಯಲ್ಲಿರುವ ವಿಜಯಪುರ ಜಿಲ್ಲೆಯ ಎಲ್ಲ ಕಾಲೇಜುಗಳು ಅಕ್ಕಮಹಾದೇವಿ ಮಹಿಳಾ ಆಡಳಿತಕ್ಕೆ ಒಳಪಡುವುದರಿಂದ ಮಹಿಳಾ ವಿಶ್ವವಿದ್ಯಾಲಯದ ಆರ್ಥಿಕ ಪರಿಸ್ಥಿಯು ಕೂಡಾ ಉತ್ತಮವಾಗುದಲ್ಲದೆ ನಮ್ಮ ಜಿಲ್ಲೆಯ ಕಾಲೇಜುಗಳಿಗೂ ತುಂಬಾ ಅನುಕೂಲುವಾಗುವುದು. ನಮ್ಮನ್ನು ಯಾಕೆ ಬಾಗಲಕೋಟ ಜಿಲ್ಲೆಯ ಜಮಖಂಡಿ ವಿಶ್ವವಿದ್ಯಾಲಯಕ್ಕೆ ಸೇರಿಸುತ್ತೀರಿ ? ಅದು ಬೇಡವೇ ಬೇಡ ಎಂದು ಒತ್ತಾಯಿಸಿದ್ದಾರೆ.

ಅವಿಭಜಿತ ವಿಜಯಪುರ ಜಿಲ್ಲೆಯು ಬಾಗಲಕೋಟೆ ಒಳಗೊಂಡು ಬಹುದೊಡ್ಡ ಜಿಲ್ಲೆಯಾಗಿತ್ತು ಅದನ್ನು ಈಗ ವಿಭಜಿತವಾದ ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕಿಗೆ ವಿಶ್ವವಿದ್ಯಾಲಯವನ್ನು ನೀಡಲಾಗಿದೆ.ಪುರಾತನ ಇತಿಹಾಸ ಪುಟದಲ್ಲಿ ರಾರಾಜಿಸುವ ಬಹುದೊಡ್ಡ ವಿಜಯಪುರ ಜಿಲ್ಲೆಯನ್ನು ಸರ್ಕಾರ ಮರೆತಿರುವ ಕಾರಣ ವಿಜಯಪುರ ಜಿಲ್ಲೆಯ ರಾಜಕೀಯ ಧುರೀಣರ ಇಚ್ಚಾಶಕ್ತಿಯ ಕೊರತೆಯಿಂದ ಅನ್ಯ ಜಿಲ್ಲೆಯ ವಿವಿ ಅಡಿ ಹೋಗುವ ಅನಿವಾರ್ಯತೆ ಸೃಷ್ಟಿಯಾಗಿದೆ.ಜಿಲ್ಲಾ ಉಸ್ತುವಾರಿ ಮಂತ್ರಿ ಎಂ.ಬಿ.ಪಾಟೀಲ, ಸಕ್ಕರೆ ಸಚಿವ ಶಿವಾನಂದ ಪಾಟೀಲ,ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,ಸಿಂದಗಿಯ ಶಾಸಕ ಅಶೋಕ ಮನಗೂಳಿ ಅವರಿಗೆ ಬರಗಾಲ ಪಿಡಿತವಾದ ವಿಜಯಪುರ ಜಿಲ್ಲೆಯ ಬಡಮಕ್ಕಳ ಶಿಕ್ಷಣಕ್ಕೆ ಎಳ್ಳಷ್ಟು ಕಾಳಜಿ ಇಲ್ಲವಾಗಿದೆ ಎಂದು ದೂರಿದ್ದಾರೆ.

ಪ್ರತ್ಯೇಕ ವಿಶ್ವವಿದ್ಯಾಲಯ ಆಗ್ರಹಕ್ಕೂ ಮುನ್ನ ಮವಿವಿಗೆ ಸೇರ್ಪಡೆ ಮಾಡಿ: ವಿಜಯಪುರ ಜಿಲ್ಲೆ ಎಲ್ಲ ಪದವಿ ಕಾಲೇಜುಗಳ ಆಡಳಿತ ಮಂಡಳಿಯವರು ನಮ್ಮ ಪ್ರತ್ಯೇಕವಾದ ವಿಶ್ವವಿದ್ಯಾಲಯ ಕೊಡಬೇಕೆಂಬ ಕೂಗು ಕೇಳುವ ಪೂರ್ವದಲ್ಲಿಯೇ ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಧಾನಸಭೆಯಲ್ಲಿ ನಮ್ಮೆಲ್ಲ ಕಾಲೇಜುಗಳ ಪರವಾಗಿ ದ್ವನಿ ಎತ್ತಬೇಕು ಎಂದು ಸಗರಿ ಆಗ್ರಹಿಸಿದ್ದಾರೆ.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ