Minister Santhosh Lad advised to take action to distribute fertilizer vouchers to farmers

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ. ಈ ಸಂಬಂಧ ಕ್ರಮ ವಹಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ರಸಗೊಬ್ಬರ ಚೀಟಿಯಲ್ಲಿ ಒಳಗೊಂಡಿರಬೇಕಾದ ಅಂಶಗಳು:
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್‌, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.

ಅನುಕೂಲಗಳು ಏನು?
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಣ್ಣಿನ ಫಲವತ್ತತೆ ಕ್ಷೀಣ ಸಮಸ್ಯೆಗೆ ಪರಿಹಾರ:
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಸಹ ಕ್ಷೀಣಿಸುತ್ತಿದೆ. ಈ ಎಲ್ಲವೂಗಳಿಗೆ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ