Minister Santhosh Lad advised to take action to distribute fertilizer vouchers to farmers

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ. ಈ ಸಂಬಂಧ ಕ್ರಮ ವಹಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ರಸಗೊಬ್ಬರ ಚೀಟಿಯಲ್ಲಿ ಒಳಗೊಂಡಿರಬೇಕಾದ ಅಂಶಗಳು:
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್‌, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.

ಅನುಕೂಲಗಳು ಏನು?
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಣ್ಣಿನ ಫಲವತ್ತತೆ ಕ್ಷೀಣ ಸಮಸ್ಯೆಗೆ ಪರಿಹಾರ:
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಸಹ ಕ್ಷೀಣಿಸುತ್ತಿದೆ. ಈ ಎಲ್ಲವೂಗಳಿಗೆ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ