Minister Santhosh Lad advised to take action to distribute fertilizer vouchers to farmers

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ. ಈ ಸಂಬಂಧ ಕ್ರಮ ವಹಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ರಸಗೊಬ್ಬರ ಚೀಟಿಯಲ್ಲಿ ಒಳಗೊಂಡಿರಬೇಕಾದ ಅಂಶಗಳು:
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್‌, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.

ಅನುಕೂಲಗಳು ಏನು?
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಣ್ಣಿನ ಫಲವತ್ತತೆ ಕ್ಷೀಣ ಸಮಸ್ಯೆಗೆ ಪರಿಹಾರ:
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಸಹ ಕ್ಷೀಣಿಸುತ್ತಿದೆ. ಈ ಎಲ್ಲವೂಗಳಿಗೆ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ