Minister Santhosh Lad advised to take action to distribute fertilizer vouchers to farmers

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲು ಸಚಿವ ಸಂತೋಷ್‌ ಲಾಡ್‌ ಸಲಹೆ

ಬೆಂಗಳೂರು, ಜುಲೈ 30: ಪಡಿತರ ಚೀಟಿ ರೀತಿಯಲ್ಲೇ ರೈತರಿಗೆ ರಸಗೊಬ್ಬರ ಚೀಟಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌. ಲಾಡ್‌ ಸಲಹೆ ನೀಡಿದ್ದಾರೆ.

ಪ್ರತಿಯೊಬ್ಬ ರೈತರಿಗೂ ಸರ್ವೆ ನಂಬರ್‌ವಾರು ಬೆಳೆಯಬೇಕಾದ ಬೆಳೆ ಮತ್ತು ಅವಶ್ಯವಿರುವ ರಸಗೊಬ್ಬರಗಳನ್ನು ಪ್ರತ್ಯೇಕವಾಗಿ ರಸಗೊಬ್ಬರ ಚೀಟಿಯಲ್ಲಿ ನಮೂದಿಸಿ ವಿತರಿಸಬಹುದಾಗಿದೆ. ಈ ಸಂಬಂಧ ಕ್ರಮ ವಹಿಸಿ ಎಂದು ಧಾರವಾಡ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೃಷಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಪತ್ರ ಮುಖೇನ ತಿಳಿಸಿದ್ದಾರೆ.

ಧಾರವಾಡದಲ್ಲಿರುವ ಕೃಷಿ ವಿಶ್ವವಿದ್ಯಾಲಯವು ವಿವಿಧ ಬೆಳೆಗಳಿಗೆ ಸಂಬಂಧಿಸಿದ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ. ಗ್ರಾಮಗಳಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಪ್ರತಿ ರೈತರ ಸರ್ವೆ ನಂಬರ್‌ವಾರು ಬೆಳೆಗಳನ್ನು ಬೆಳೆಯಲು ಸೂಕ್ತ ಅಧ್ಯಯನ ನಡೆಸಿ ಶಿಫಾರಸು ಮಾಡುವುದು ಅನಿವಾರ್ಯವಾಗಿದೆ. ಇದರಿಂದ ರೈತರ ಬೇಡಿಕೆಗಳಾದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಅನುಪಾತವನ್ನು ಸರಿದೂಗಿಸಲು ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

ರಸಗೊಬ್ಬರ ಚೀಟಿಯಲ್ಲಿ ಒಳಗೊಂಡಿರಬೇಕಾದ ಅಂಶಗಳು:
ರಸಗೊಬ್ಬರ ಚೀಟಿಯಲ್ಲಿ ಹಲವು ಅಂಶಗಳು ಒಳಗೊಂಡಿರಬೇಕು. ರೈತರ ಸರ್ವೆ ನಂಬರ್‌, ಜಮೀನಿನ ಮಣ್ಣಿನ ಫಲವತ್ತತೆಯ ಪರೀಕ್ಷಾ ವರದಿ, ಪರೀಕ್ಷಾ ವರದಿಯ ಅನುಗುಣವಾಗಿ ಬೆಳೆಯ ಬೇಕಾದ ಬೆಳೆ, ಶಿಫಾರಸು ಮಾಡಿದ ಬೆಳೆಗೆ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರದ ವಿವರ ಹಾಗೂ ಶಿಫಾರಸಿಗೆ ಅನುಗುಣವಾಗಿ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ವಿವರಣೆ ಇರಬೇಕು ಎಂದಿದ್ದಾರೆ.

ಅನುಕೂಲಗಳು ಏನು?
ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳುವುದರಿಂದ ಬಿತ್ತನೆಗೆ ಬೇಕಾದ ಬೀಜ, ರಸಗೊಬ್ಬರದ ಕೊರತೆ ಉಂಟಾಗುವುದಿಲ್ಲ. ಈ ಸಂಬಂಧ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಧಾರವಾಡ ಜಿಲ್ಲೆಯ ಒಂದು ತಾಲೂಕಿನಲ್ಲಿ ಒಂದು ಹೋಬಳಿಯಲ್ಲಿ ಪ್ರಾಯೋಗಿಕವಾಗಿ ಈ ವಿಧಾನ ಅನುಸರಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಕ್ರಮ ವಹಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಮಣ್ಣಿನ ಫಲವತ್ತತೆ ಕ್ಷೀಣ ಸಮಸ್ಯೆಗೆ ಪರಿಹಾರ:
ರೈತರು ಬೆಳೆಯುತ್ತಿರುವ ಬೆಳೆಗಳಿಗೂ ಹಾಗೂ ರಸಗೊಬ್ಬರದ ಬೇಡಿಕೆಗೂ ವ್ಯತ್ಯಾಸ ಉಂಟಾಗುತ್ತಿದೆ. ಒಂದೇ ರೀತಿಯ ಬೆಳೆ ಬೆಳೆಯುವುದು ಹೆಚ್ಚುತ್ತಿದೆ. ಹಲವು ಬಾರಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕುತ್ತಿಲ್ಲ. ಇದೆಲ್ಲಕ್ಕಿಂತ ಮಣ್ಣಿನ ಫಲವತ್ತತೆ ಸಹ ಕ್ಷೀಣಿಸುತ್ತಿದೆ. ಈ ಎಲ್ಲವೂಗಳಿಗೆ ಪರಿಹಾರ ಎಂಬಂತೆ ರಸಗೊಬ್ಬರ ಚೀಟಿ ಸಹಾಯವಾಗಲಿದೆ ಎಂದು ಸಚಿವರು ವಿವರಿಸಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ