Minister Santhosh Lad launched mobile health units

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಧಾರವಾಡ, ಮೇ 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದ ಸರ್ಕಿಟ್‌ ಹೌಸ್‌ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಗೆ ಸಂಚಾರಿ ಆರೋಗ್ಯ ಘಟಕಗಳನ್ನು ನೀಡಲಾಗಿದೆ. ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಹೋಗಿ, ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ರೀತಿಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ತಪಾಸಣೆ ಕುರಿತ ಅವರ ದಾಖಲೆಗಳು ಆನ್ ಲೈನ್ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ. ಕಾರ್ಮಿಕರ ಅಧಿಕೃತ ದಾಖಲೆಗಳನ್ನು ಅಂತರ್ಜಾಲದ ಮೂಲಕ ದೃಢ ಪಡಿಸಿಕೊಳ್ಳಲಾಗುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್‍ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು ಎಂದರು.

ರೂಟ್ ಮ್ಯಾಪ್ ತಯಾರಿಸುವಾಗ ಸಂಸ್ಥೆಯು ಎಲ್ಲಾ ತಾಲ್ಲೂಕುಗಳು ಮತ್ತು ತಾಲ್ಲೂಕಿನ ಎಲ್ಲಾ ಪ್ರದೇಶಗಳು (ಗ್ರಾಮ, ವಾರ್ಡ್, ಹೋಬಳಿ) ಒಳಪಡುವ ರೀತಿ ಕ್ರಮವಹಿಸಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್‍ನ್ನು ಸಿದ್ದಪಡಿಸುತ್ತಾರೆ. ರೂಟ್ ಮ್ಯಾಪ್‍ನ್ನು ಸಿದ್ದಪಡಿಸುವಾಗ ಪ್ರಯಾಣದ ಸಮಯವು ಅತ್ಯಂತ ಕಡಿಮೆ ಇರುವಂತೆ ಹಾಗೂ ನಿಗದಿತ ಸ್ಥಳದಲ್ಲಿ ಸಂಚಾರಿ ಆರೋಗ್ಯ ಘಟಕಗಳು ಕನಿಷ್ಠ 04 ಗಂಟೆಗಳಾದರೂ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಎನ್. ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಚೀನ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಇತರರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ