Minister Santhosh Lad launched mobile health units

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಧಾರವಾಡ, ಮೇ 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದ ಸರ್ಕಿಟ್‌ ಹೌಸ್‌ನಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಗೆ ಸಂಚಾರಿ ಆರೋಗ್ಯ ಘಟಕಗಳನ್ನು ನೀಡಲಾಗಿದೆ. ನೋಂದಾಯಿತ ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಿಗೆ ಹೋಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಹೇಳಿದರು.

ಕಟ್ಟಡ ನಿರ್ಮಾಣ ಪ್ರದೇಶಗಳಿಗೆ ಹೋಗಿ, ಜ್ವರ, ಕೆಮ್ಮು, ಮಧುಮೇಹ, ರಕ್ತದೊತ್ತಡ, ರಕ್ತ ಪರೀಕ್ಷೆ ಸೇರಿದಂತೆ ಸುಮಾರು 20 ರೀತಿಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ತಪಾಸಣೆ ಕುರಿತ ಅವರ ದಾಖಲೆಗಳು ಆನ್ ಲೈನ್ ಮೂಲಕ ನೇರವಾಗಿ ಕಾರ್ಮಿಕ ಇಲಾಖೆಯ ಮುಖ್ಯ ಕಚೇರಿಗೆ ತಲುಪುತ್ತದೆ. ಕಾರ್ಮಿಕರ ಅಧಿಕೃತ ದಾಖಲೆಗಳನ್ನು ಅಂತರ್ಜಾಲದ ಮೂಲಕ ದೃಢ ಪಡಿಸಿಕೊಳ್ಳಲಾಗುತ್ತದೆ ಎಂದರು.

ಕಾರ್ಯಾದೇಶ ಪಡೆದಿರುವ ಸಂಸ್ಥೆಗಳು ಪ್ರತಿ ತಿಂಗಳು ಸಂಚಾರಿ ಆರೋಗ್ಯ ಕ್ಲಿನಿಕ್ ಸಂಚರಿಸುವ ಮಾರ್ಗ, ಸ್ಥಳದ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ, ಖಾತರಿಪಡಿಸಿಕೊಳ್ಳಬೇಕು. ಪ್ರತಿ ತಿಂಗಳ ರೂಟ್ ಮ್ಯಾಪ್‍ಗಳನ್ನು ಕನಿಷ್ಠ 15 ದಿನಗಳ ಮುಂಚಿತವಾಗಿ ಸಿದ್ದಪಡಿಸಿ, ವಾಹನಗಳು ಸಂಚರಿಸುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರಚಾರ ಮಾಡಬೇಕು ಎಂದರು.

ರೂಟ್ ಮ್ಯಾಪ್ ತಯಾರಿಸುವಾಗ ಸಂಸ್ಥೆಯು ಎಲ್ಲಾ ತಾಲ್ಲೂಕುಗಳು ಮತ್ತು ತಾಲ್ಲೂಕಿನ ಎಲ್ಲಾ ಪ್ರದೇಶಗಳು (ಗ್ರಾಮ, ವಾರ್ಡ್, ಹೋಬಳಿ) ಒಳಪಡುವ ರೀತಿ ಕ್ರಮವಹಿಸಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಒಳಪಡುವ ರೀತಿಯಲ್ಲಿ ರೂಟ್ ಮ್ಯಾಪ್‍ನ್ನು ಸಿದ್ದಪಡಿಸುತ್ತಾರೆ. ರೂಟ್ ಮ್ಯಾಪ್‍ನ್ನು ಸಿದ್ದಪಡಿಸುವಾಗ ಪ್ರಯಾಣದ ಸಮಯವು ಅತ್ಯಂತ ಕಡಿಮೆ ಇರುವಂತೆ ಹಾಗೂ ನಿಗದಿತ ಸ್ಥಳದಲ್ಲಿ ಸಂಚಾರಿ ಆರೋಗ್ಯ ಘಟಕಗಳು ಕನಿಷ್ಠ 04 ಗಂಟೆಗಳಾದರೂ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಎನ್. ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಎಂ. ಬ್ಯಾಕೋಡ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಚೀನ್, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು ಇತರರು ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ