Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ