Minister Santhosh Lad launched our Nagar, Swachh Nagar special campaign

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ, ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ. ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ