MLA Kashapanavar has come to Adapur.. Continued argument..?

ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು.. “ಯಾರಿವಳ‌ ಗಂಡ” ನಾಟಕ ಉದ್ಘಾಟನೆಗೆ ಶಾಸಕ ಕಾಶಪ್ಪನವರ ಆದಾಪೂರಕ್ಕೆ ಬರ್ತಿದ್ದಾರೆ.. ಮುಂದುವರಿಯುತ್ತಾ ವಾಗ್ವಾದ..?

ಇಳಕಲ್: ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆ ಅಂಗವಾಗಿ ಇಂದು (27-8-2024) ಆಯೋಜನೆಗೊಂಡಿರುವ “ಯಾರಿವಳ‌ ಗಂಡ” ಸಾಮಾಜಿಕ ನಾಟಕವನ್ನು ಉದ್ಘಾಟನೆಗೆ ಆಗಮಿಸುವುದು ಖಚಿತವಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ನಿನ್ನೆ ಪ್ರದರ್ಶನಗೊಂಡ “ಕಿಲಾಡಿ ರಂಗಣ್ಣ” ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದ್ದ ಮಾಜಿ‌ ಶಾಸಕ ದೊಡ್ಡನಗೌಡ ಜಿ.‌ ಪಾಟೀಲ್ ಅವರ ಮಗ ರಾಜುಗೌಡ ಪಾಟೀಲ್ ಅವರು, ಶಾಸಕ ವಿಜಯಾನಂದ ಕಾಶಪ್ಪನವರ ಮೇಲೆ ಏಕವಚನದಲ್ಲಿಯೇ ವಾಗ್ದಾಳಿ ಮಾಡಿ.. “ನಾಳೆ ಬಾ ಆದಾಪೂರಕ್ಕ.. ಏನ್ ಮಾಡ್ತಿ ನೋಡ್ತಿವಿ” ಎಂದು ಅಬ್ಬರಿಸಿದ್ದಾರೆ.

ಇಂದು ಗ್ರಾಮಕ್ಕೆ ಆಗಮಿಸಲಿರುವ ಶಾಸಕ ವಿಜಯಾನಂದ ಕಾಶಪ್ಪನವರ ಅವರು ನಾಟಕ ಉದ್ಘಾಟನೆ ಮಾಡಿದ ನಂತರ ಏನು ಮಾತನಾಡುತ್ತಾರೆ ಎನ್ನುವ ಕುತೂಹಲ ಗ್ರಾಮಸ್ಥರಲ್ಲಿದೆ. ಈ ಕುತೂಹಲಕ್ಕೆ ರಾತ್ರಿ ಸುಮಾರು 11 ಗಂಟೆಗೆ ತೆರೆಬೀಳಲಿದೆ.

ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ: ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆಗೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

ಟಗರಿನ ಕಾಳಗಕ್ಕೆ ವೇದಿಕೆ ಸಜ್ಜು:

ಇಂದು(27-8-2024) ಮಧ್ಯಾಹ್ನ 3 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಟಗರಿನ ಕಾಳಗಕ್ಕೆ ಗ್ರಾಮದ ಗುರು ಹಿರಿಯರು ಚಾಲನೆ ನೀಡಲಿದ್ದಾರೆ.

ನಾಲ್ಕು ಬಹುಮಾನಗಳಿವೆ:

ಪ್ರಥಮ ಬಹುಮಾನ :
7001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಚನ್ನಪ್ಪಗೌಡ ವೀ. ಗುಡಿಹಿಂದಿನ)

ದ್ವಿತೀಯ ಬಹುಮಾನ:
5001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ವೆಂಕನಗೌಡ ದೊ. ಅಗಸಿಮುಂದಿನ)

ತೃತೀಯ ಬಹುಮಾನ:
3001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ರಾಜುಗೌಡ ನಿಂ. ಜೋಗರೆಡ್ಡಿ)

ಚತುರ್ಥ ಬಹುಮಾನ:
2001 ರೂಪಾಯಿ ಮತ್ತು ಟ್ರೋಫಿ
(ಕೊಡುಗೆ: ಲಕ್ಷ್ಮಣ ಮ. ಜಾಡರ್)

ವೀಕ್ಷಕ ವಿವರಣೆಯನ್ನು ರಾಜುಗೌಡ ಶಂ. ಹನಮಗೌಡ್ರ ಅವರು ನೀಡಲಿದ್ದಾರೆ. ನಿರ್ಣಾಯಕರಾಗಿ ದೇವಪ್ಪ ಬ. ಬಡಕುರಿ, ಸೋಮಶೇಖರ ಕುರಿ, ಪರಸಪ್ಪ ಮಿಂಚೇರಿ, ಯಂಕಪ್ಪ ಕುರಿ ಪಂದ್ಯವನ್ನು ನಡೆಸಿಕೊಡಲಿದ್ದಾರೆ.

ಪ್ರವೇಶ ಫೀ: 301 ರೂಪಾಯಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ‌8123485661 (ಯಂಕಪ್ಪ), 8088917431 (ಶಂಕರ್), 8310414151 (ಹನಮಂತ), 9742797909 (ರಾಜು) ಸಂಪರ್ಕಿಸಿ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು