MLA Nad Gowda lashed out at Nadahalli: The people of the constituency have given you five years of rest

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ. ಸುಮ್ಮನೆ ಮನೆಯಲ್ಲಿದ್ದು ರೆಸ್ಟ್ ಮಾಡಿ ಎಂದು ಶಾಸಕ ಸಿ. ಎಸ್. ನಾಡಗೌಡ ಅವರು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಅವರ ಹೆಸರು ಪ್ರಸ್ತಾಪಿಸದೇ ಟಾಂಗ್ ನೀಡಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಮಾಜಿ ಶಾಸಕರು ಮಾಡುತ್ತಿರುವುದೆಲ್ಲ ಪ್ರಚಾರಕ್ಕೋಸ್ಕರ. ರೈತರಿಗೆ ಪರಿಹಾರ ನಾನು ನಮ್ಮ ಮನೆಯಿಂದ ಕೊಡುವುದಿಲ್ಲ. ನೀವು ಹಿಂದೆ ದಳದಲ್ಲಿ, ಒಮ್ಮೆ ನಮ್ಮ ಪಕ್ಷದಲ್ಲಿ, ಈಗ ಬಿಜೆಪಿಯಲ್ಲಿ ಶಾಸಕರಾಗಿದ್ದವರು.ಇಂತಹ ಸನ್ನಿವೇಶಗಳಲ್ಲಿ ಸರ್ಕಾರದಿಂದ ಎನ್.ಡಿ.ಆರ್‌ಎಫ್/ ಎಸ್.ಡಿ.ಆರ್.ಎಫ್ ನಿಯಮಗಳ ಅನ್ವಯ ಪರಿಹಾರ ಕೊಡಲಾಗುತ್ತದೆ ಎಂಬುದು ಗೊತ್ತಿಲ್ಲದ ವಿಷಯವೇನಲ್ಲ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ 2013-18ರ ಅವಧಿಯಲ್ಲಿ ಅತೀವೃಷ್ಟಿಯಿಂದ ಹಾನಿ ಉಂಟಾಗಿದ್ದ ತೋಟಗಾರಿಕೆ ಬೆಳೆ ದ್ರಾಕ್ಷಿ ಗೆ ಹೆಕ್ಟೇರ್‌ಗೆ 30 ಸಾವಿರ ರೂ. ಪರಿಹಾರ ಕೊಡಲಾಗಿದೆ. ಬೆಳೆಹಾನಿ ಸಮೀಕ್ಷೆ ಆದ ತಕ್ಷಣ ಪರಿಹಾರ ನೀಡಲಾಗಿತ್ತು. ಇದರಲ್ಲಿ ರಾಜಕಾರಣ ಮಾಡುವುದೇನಿದೆ? ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಾಲ್ಕು ಸಲ ಸಭೆ ಮಾಡಿದ್ದೇನೆ. ತಾಲ್ಲೂಕು ಅಧಿಕಾರಿಗಳ ಸಭೆ ಕರೆದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ವಿಮೆ ಮಾಡಿದ ರೈತರಿಗೆ ವಿಮಾ ಕಂಪನಿಯ ಮೂಲಕ ಪರಿಹಾರ ದೊರೆಯುತ್ತದೆ. ಆದರೆ, ವಿಮೆ ಮಾಡದ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಲು ಸಚಿವ ಸಂಪುಟದಲ್ಲಿ ಸೂಕ್ತ ಪರಿಹಾರ ನೀಡಲು ಸಿದ್ದರಾಮಯ್ಯನವರು ತೀರ್ಮಾನ ಕೈಗೊಳ್ಳಲಿದ್ದಾರೆ. ಯಾರಿಗೂ ರೈತನನ್ನು ಕಡೆಗಣಿಸಬೇಕು ಎಂಬ ಉದ್ದೇಶ ಇರುವುದಿಲ್ಲ. ಇದನ್ನು ರಾಜಕಾರಣದ ವಿಷಯವಾಗಿ ತೆಗೆದುಕೊಳ್ಳಬೇಡಿ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ರೈತನ ಜಮೀನಿನಲ್ಲಿ ಬೆಳೆದ ಬೆಳೆ ಒಂದು ಎಕರೆಗೆ ಶೇ.33ರಷ್ಟು ಹಾನಿಯನ್ನು ಅಂದಾಜು ಲೆಕ್ಕ ಹಾಕಿ ಪರಿಹಾರ ನೀಡಲಾಗುತ್ತದೆ. ಸರ್ಕಾರದಿಂದ ಒಬ್ಬ ರೈತರಿಗೆ 4.38 ಎಕರೆಗೆ ಸಿಮೀತ ಇರುವಂತೆ ಪರಿಹಾರ ನೀಡಲಾಗುತ್ತದೆ. ಇದಕ್ಕಿಂತ ಹೆಚ್ಚು ಹಾನಿ ಸಂಭವಿಸಿದರೆ ಅದಕ್ಕೆ ಪರಿಹಾರ ನೀಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯನ್ವಯವೇ ಜಂಟಿ ಸಮೀಕ್ಷೆ ನಡೆಸಿ ಜಿಪಿಎಸ್ ಫೋಟೋ ಪಡೆದುಕೊಂಡು ರೈತರ ಪಟ್ಟಿ ಲಗತ್ತಿಸಿದ್ದೇವೆ ಎಂದು ತಿಳಿಸಿದರು.

ಒಂದನೆ ಹಂತದ ಸಮೀಕ್ಷೆಯ ಪಟ್ಟಿಯನ್ನು ಪಂಚಾಯಿತಿಯಲ್ಲಿ ಲಗತ್ತಿಸಿದ್ದು ಅದಕ್ಕೆ ಏಳು ದಿನ ಕಾಲಾವಕಾಶ ನೀಡಲಾಗಿತ್ತು. ಈಗ ಸಮೀಕ್ಷೆ ಪ್ರಗತಿಯಲ್ಲಿದ್ದು ಎರಡನೆ ಪಟ್ಟಿಯನ್ನು ಲಗತ್ತಿಸಿದಾಗ ಅದಕ್ಕೆ ಆಕ್ಷೇಪಣೆಗೆ ಏಳು ದಿನಗಳ ಕಾಲಾವಕಾಶ ರೈತರಿಗೆ ನೀಡಲಾಗುತ್ತದೆ ಎಂದು ಹೇಳಿದರು.

ಬೆಳೆಹಾನಿ ಜಂಟಿ ಸಮೀಕ್ಷೆಗೆ ಅಧಿಕಾರಿಗಳ ಕೊರತೆ ಇರುವುದು ನಿಜ. ಸದ್ಯಕ್ಕೆ ಸರ್ಕಾರದಿಂದ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆದಿದ್ದು ಅದು ಮುಗಿದ ಬಳಿಕ ಇನ್ನಷ್ಟು ಸಿಬ್ಬಂದಿಯನ್ನು ಬೆಳೆಹಾನಿ ಸಮೀಕ್ಷೆಗೆ ನಿಯೋಜಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ತಹಶೀಲ್ದಾರ್ ಕೀರ್ತಿ ಚಾಲಕ, ಕೃಷಿ ಇಲಾಖೆಯ ಎಡಿ ಎಸ್.ಡಿ.ಭಾವಿಕಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ, ಗೋವಿಂದರೆಡ್ಡಿ ಮೆದಕಿನಾಳ,ಮುಖಂಡ ಬುಡ್ಡೇಸಾಬ ಚಪ್ಪರಬಂದ ಇತರರು ಇದ್ದರು.

ಒಂದನೇ ಹಂತದ ಸಮೀಕ್ಷೆ ನಡೆಸಲಾಗಿದೆ. ಇನ್ನೊಂದು ಹಂತದಲ್ಲೂ ಸಮೀಕ್ಷೆ ನಡೆಸಲಾಗುತ್ತದೆ. ಮಳೆ ಇನ್ನೂ ಮುಗದಿಲ್ಲ. ರೈತರು ಆತಂಕಪಡಬೇಕಿಲ್ಲ. ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಪ್ರತಿಹೊಲಕ್ಕೆ ಹೋಗಿ ಅಧಿಕಾರಿಗಳು ಸಮೀಕ್ಷೆ ಮಾಡಲು ಆಗುವುದಿಲ್ಲ. ಕೆಲವೊಂದಿಷ್ಟು ಜಮೀನುಗಳನ್ನು ಆಯ್ಕೆ ಮಾಡಿ ಹಾನಿ ಅಂದಾಜನ್ನು ಮೌಲ್ಯ ಮಾಡಲಾಗುತ್ತದೆ. ಅಂತಹ ರೈತರ ಪಟ್ಟಿಯನ್ನು ಪಂಚಾಯಿತಿಯಲ್ಲಿ ಲಗತ್ತಿಸಿದಾಗ ಇನ್ನುಳಿದ ರೈತರು ತಮ್ಮ ಹೆಸರು ಬಂದಿಲ್ಲದಿರುವುದನ್ನು ಗಮನಿಸಿ ತಮ್ಮ ಬೆಳೆ ಹಾನಿಯಾದ ಬಗ್ಗೆ ಅರ್ಜಿಯನ್ನು ನೀಡಬೇಕು. ಅದಕ್ಕೆ ಕಾಲಾವಕಾಶ ಕಲ್ಪಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಡಂಗೂರ ಸಾರಲು ತಿಳಿಸಲಾಗಿದೆ.
—ಸಿ.ಎಸ್.ನಾಡಗೌಡ,ಶಾಸಕ

ಮಾನವೀಯತೆಯ ಸಂವೇದನೆಯ ಗುಣಗಳ ಬಗ್ಗೆ ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ. ನಮ್ಮ ಮನೆತನದ ಸಂಸ್ಕಾರದಿಂದ ನನಗೆ ಹುಟ್ಟಿನಿಂದಲೇ ಆ ಗುಣಗಳು ಬಂದಿವೆ. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಹೋಗಲು ಆಗಿರಲಿಲ್ಲ. ಆದರೆ, ಆ ಕುಟುಂಬಕ್ಕೆ ನೆರವು ದೊರೆಯಬೇಕಾದ ನಿಟ್ಟಿನಲ್ಲಿ ಕೆಲಸಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆನೆ. ಅದನ್ನು ರಾಜಕೀಯಕರಣಗೊಳಿಸುವ ಅಗತ್ಯವಿಲ್ಲ. ಮಾನವೀಯತೆಯ ಕುರಿತು ನಿಮ್ಮಿಂದ ನಾನು ಪಾಠ ಕಲಿಯಬೇಕಾಗಿಲ್ಲ ಎಂದು ಮಾಜಿ ಶಾಸಕ ನಡಹಳ್ಳಿ ಅವರ ಹೆಸರು ಪ್ರಸ್ತಾಪ ಮಾಡದೇ ನಾಡಗೌಡರು ನಡಹಳ್ಳಿಯವರ ಟೀಕೆಗೆ ಪ್ರತ್ಯುತ್ತರ ನೀಡಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ