MLA Nad Gowda Ranathantra: Unopposed choice for TAPCMS of Muddebiha

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು.

ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ), ಹಿಂದುಳಿದ ಬ ವರ್ಗದಿಂದ ಮನೋಹರ ಮೇಟಿ(ಬಸರಕೋಡ), ಪರಿಶಿಷ್ಟ ಜಾತಿ ವರ್ಗದಿಂದ ಚಿದಾನಂದ ಸೀತಿಮನಿ(ಕೋಳೂರ), ಎಸ್.ಟಿ ವರ್ಗದಿಂದ ಗುರಣ್ಣ ಹತ್ತೂರ(ಕೊಣ್ಣೂರ), ಅ ವರ್ಗದ ಸಂಘಗಳ ಮತಕ್ಷೇತ್ರದಿಂದ ತಂಗಡಗಿ ಪಿಕಪಿಎಸ್‌ನ ಬಸವರಾಜ ಇಸ್ಲಾಂಪೂರ, ಹುಲ್ಲೂರ ಪಿಕೆಪಿಎಸ್‌ನ ಸುರೇಶ ಹಳೇಮನಿ, ಗುಂಡಕನಾಳ ಪಿಕೆಪಿಎಸ್‌ನ ಮಲ್ಲನಗೌಡ ಬಿರಾದಾರ, ಢವಳಗಿ ಪಿಕೆಪಿಎಸ್‌ನಿಂದ ನೀಲಕಂಠಗೌಡ ಗೌಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಅ ವರ್ಗದಿಂದ 16 ಜನ ನಾಮಪತ್ರ ಸಲ್ಲಿಸಿದವರ ಪೈಕಿ 12 ಜನ ನಾಮಪತ್ರ ವಾಪಸ್ ಪಡೆದುಕೊಂಡರೆ, ಬ ವರ್ಗದಿಂದ 26 ಜನರಲ್ಲಿ 18 ಜನ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡರು ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದರು.

ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ಟಿಎಪಿಸಿಎಂಎಸ್‌ನಿಂದ, ಹಿರಿಯರು ಚುನಾವಣಾ ಕಣದಲ್ಲಿ ನನ್ನನ್ನು ಉಳಿಸಿ ಬೆಳೆಸಿದ್ದರಿಂದ ಜನಸೇವೆಗೆ ಮುಂದಾಗಿದ್ದೇನೆ. ಇದು ಕೃಷಿಕರ ಕ್ಷೇತ್ರವಾಗಿದ್ದು ಇಲ್ಲಿ ಆ ಪಕ್ಷ ಈ ಪಕ್ಷ ಎಂದು ರಾಜಕಾರಣ ಮಾಡುವುದಿಲ್ಲ. ಬಿಜೆಪಿಯ ಪ್ರಭುಗೌಡ ದೇಸಾಯಿ, ಆರ್.ಎಸ್.ಪಾಟೀಲ ಕೂಚಬಾಳ ಅವರ ಪಾತ್ರವೂ ಅವಿರೋಧ ಆಯ್ಕೆಯಲ್ಲಿ ಇದೆ. ಟಿಎಪಿಸಿಎಂಎಸ್‌ನಲ್ಲಿರುವುದು ಈಗ ಪಕ್ಕಾ ಕಾಂಗ್ರೆಸ್. ಕಾಂಗ್ರೆಸ್ ಎಂದರೆ ಎಲ್ಲ ಜಾತಿ, ಜನಾಂಗ, ಪಕ್ಷದವರನ್ನು ಜೊತೆಗೂಡಿ ಕರೆದುಕೊಂಡು ಹೋಗುವುದಾಗಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಸುರೇಶಗೌಡ ಪಾಟೀಲ ಇಂಗಳಗೇರಿ, ಶ್ರೀಶೈಲ ಮರೋಳ, ರಾಜುಗೌಡ ಕೊಂಗಿ, ಸಂತೋಷ ಚವ್ಹಾಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ, ಬಾಪುಗೌಡ ಪೀರಾಪೂರ, ಅಪ್ಪುಗೌಡ ನಾಡಗೌಡ ಸೇರಿದಂತೆ ಹಲವರು ಇದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆ ಅಧಿಕಾರಿ ಸಂತೋಷ ಇಲಕಲ್, ಟಿಎಪಿಸಿಎಂಎಸ್ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಇದ್ದರು.

ಫಲಿಸಿದ ನಾಡಗೌಡರ ರಣತಂತ್ರ: ಶಾಸಕ ಸಿ.ಎಸ್.ನಾಡಗೌಡ ಅವರು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಕೂರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮುಂಚೆ ಮಾಜಿ ಅಧ್ಯಕ್ಷ ಎಂ.ಎಸ್. ಮೇಟಿ ಅವರ ಹಿಡಿತದಲ್ಲಿದ್ದ ಟಿಎಪಿಸಿಎಂಎಸ್ ಆಡಳಿತದ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಈ ಬಾರಿ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ