MLA Nad Gowda Ranathantra: Unopposed choice for TAPCMS of Muddebiha

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು.

ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ), ಹಿಂದುಳಿದ ಬ ವರ್ಗದಿಂದ ಮನೋಹರ ಮೇಟಿ(ಬಸರಕೋಡ), ಪರಿಶಿಷ್ಟ ಜಾತಿ ವರ್ಗದಿಂದ ಚಿದಾನಂದ ಸೀತಿಮನಿ(ಕೋಳೂರ), ಎಸ್.ಟಿ ವರ್ಗದಿಂದ ಗುರಣ್ಣ ಹತ್ತೂರ(ಕೊಣ್ಣೂರ), ಅ ವರ್ಗದ ಸಂಘಗಳ ಮತಕ್ಷೇತ್ರದಿಂದ ತಂಗಡಗಿ ಪಿಕಪಿಎಸ್‌ನ ಬಸವರಾಜ ಇಸ್ಲಾಂಪೂರ, ಹುಲ್ಲೂರ ಪಿಕೆಪಿಎಸ್‌ನ ಸುರೇಶ ಹಳೇಮನಿ, ಗುಂಡಕನಾಳ ಪಿಕೆಪಿಎಸ್‌ನ ಮಲ್ಲನಗೌಡ ಬಿರಾದಾರ, ಢವಳಗಿ ಪಿಕೆಪಿಎಸ್‌ನಿಂದ ನೀಲಕಂಠಗೌಡ ಗೌಡರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಅ ವರ್ಗದಿಂದ 16 ಜನ ನಾಮಪತ್ರ ಸಲ್ಲಿಸಿದವರ ಪೈಕಿ 12 ಜನ ನಾಮಪತ್ರ ವಾಪಸ್ ಪಡೆದುಕೊಂಡರೆ, ಬ ವರ್ಗದಿಂದ 26 ಜನರಲ್ಲಿ 18 ಜನ ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡರು ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದರು.

ನೂತನವಾಗಿ ಆಯ್ಕೆಯಾದ ನಿರ್ದೇಶಕರನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ, ನನ್ನ ರಾಜಕೀಯ ಜೀವನ ಆರಂಭವಾಗಿದ್ದೇ ಟಿಎಪಿಸಿಎಂಎಸ್‌ನಿಂದ, ಹಿರಿಯರು ಚುನಾವಣಾ ಕಣದಲ್ಲಿ ನನ್ನನ್ನು ಉಳಿಸಿ ಬೆಳೆಸಿದ್ದರಿಂದ ಜನಸೇವೆಗೆ ಮುಂದಾಗಿದ್ದೇನೆ. ಇದು ಕೃಷಿಕರ ಕ್ಷೇತ್ರವಾಗಿದ್ದು ಇಲ್ಲಿ ಆ ಪಕ್ಷ ಈ ಪಕ್ಷ ಎಂದು ರಾಜಕಾರಣ ಮಾಡುವುದಿಲ್ಲ. ಬಿಜೆಪಿಯ ಪ್ರಭುಗೌಡ ದೇಸಾಯಿ, ಆರ್.ಎಸ್.ಪಾಟೀಲ ಕೂಚಬಾಳ ಅವರ ಪಾತ್ರವೂ ಅವಿರೋಧ ಆಯ್ಕೆಯಲ್ಲಿ ಇದೆ. ಟಿಎಪಿಸಿಎಂಎಸ್‌ನಲ್ಲಿರುವುದು ಈಗ ಪಕ್ಕಾ ಕಾಂಗ್ರೆಸ್. ಕಾಂಗ್ರೆಸ್ ಎಂದರೆ ಎಲ್ಲ ಜಾತಿ, ಜನಾಂಗ, ಪಕ್ಷದವರನ್ನು ಜೊತೆಗೂಡಿ ಕರೆದುಕೊಂಡು ಹೋಗುವುದಾಗಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಸುರೇಶಗೌಡ ಪಾಟೀಲ ಇಂಗಳಗೇರಿ, ಶ್ರೀಶೈಲ ಮರೋಳ, ರಾಜುಗೌಡ ಕೊಂಗಿ, ಸಂತೋಷ ಚವ್ಹಾಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಎಸ್.ಪಾಟೀಲ, ಬಾಪುಗೌಡ ಪೀರಾಪೂರ, ಅಪ್ಪುಗೌಡ ನಾಡಗೌಡ ಸೇರಿದಂತೆ ಹಲವರು ಇದ್ದರು. ಸಹಾಯಕ ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆ ಅಧಿಕಾರಿ ಸಂತೋಷ ಇಲಕಲ್, ಟಿಎಪಿಸಿಎಂಎಸ್ ಸಹಾಯಕ ವ್ಯವಸ್ಥಾಪಕ ಗುರುರಾಜ ಕೋನರೆಡ್ಡಿ ಇದ್ದರು.

ಫಲಿಸಿದ ನಾಡಗೌಡರ ರಣತಂತ್ರ: ಶಾಸಕ ಸಿ.ಎಸ್.ನಾಡಗೌಡ ಅವರು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಕೂರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮುಂಚೆ ಮಾಜಿ ಅಧ್ಯಕ್ಷ ಎಂ.ಎಸ್. ಮೇಟಿ ಅವರ ಹಿಡಿತದಲ್ಲಿದ್ದ ಟಿಎಪಿಸಿಎಂಎಸ್ ಆಡಳಿತದ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಈ ಬಾರಿ ಯಾರ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ