ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ನಲವತ್ತು ವರ್ಷಗಳ ಕಾಲ ಅವರು ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಸ್ತಿತ್ವ ಕಂಡುಕೊoಡಿರುವುದೇ ನಾಡಗೌಡರಿಂದ.ಆದರೆ ಅವರಿಗೆ ನಿರಂತರವಾಗಿ ಪಕ್ಷದಿಂದ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಬಾಪುರಾವ್ ದೇಸಾಯಿ ಹಡಗಲಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿ, ಹೈಕಮಾಂಡ್‌ನ ವರಿಷ್ಠರಾದ ಸೋನಿಯಾ ಗಾಂಧಿ,ರಾಹುಲ್ ಗಾಂಧಿ,ಮಲ್ಲಿಕಾರ್ಜುನ ಖರ್ಗೆ,ಉಸ್ತುವಾರಿ ರಣದೀಪ ಸುರ್ಜೇವಾಲಾ, ಸಿಎಂ ಡಿ.ಕೆ.ಶಿವಕುಮಾರ,ಪಕ್ಷದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ,ಮಾಜಿ ಸಿಎಂ ಸಿದ್ಧರಾಮಯ್ಯನವರು ಪ್ರಜಾಧ್ವನಿ ಸಮಾಜವೇಶದಲ್ಲಿ ಮಾತು ಕೊಟ್ಟಂತೆ ನಾಡಗೌಡರನ್ನು ಮಂತ್ರಿ ಮಾಡಿ ಕಾರ್ಯಕರ್ತರು,ಕ್ಷೇತ್ರದ ಮತದಾರರ ನಂಬಿಕೆಯನ್ನು ಉಳಿಸಿಕೊಳ್ಳಬೇಕು.ಇಲ್ಲದಿದ್ದಲ್ಲಿ ಪಕ್ಷದ ಎಲ್ಲ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಹೇಳಿದರು.

ತಾಳಿಕೋಟಿಯ ಮುಸ್ಲಿಂ ಸಮಾಜದ ಧಾರ್ಮಿಕ ಮುಖಂಡ ಸಯ್ಯದ ಶಕೀಲ್‌ಅಹ್ಮದ ಖಾಜಿ ಮಾತನಾಡಿ, ಎಸ್.ಎಂ.ಕೃಷ್ಣಾ,ಎo.ವೀರಪ್ಪಮೊಯ್ಲಿ,ಎಸ್.ಬoಗಾರಪ್ಪ,ಸಿದ್ಧರಾಮಯ್ಯನವರ ಅವಧಿಯಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿರುವ ಸರಳ ಸಜ್ಜನಿಕೆಯ ರಾಜಕಾರಣಿ ನಾಡಗೌಡರು.ಕಾಂಗ್ರೆಸ್ ಹೈಕಮಾಂಡ್ ನಾಡಗೌಡರನ್ನು ಮಂತ್ರಿ ಮಾಡಿದ್ದಾದರೆ ಕಾಂಗ್ರೆಸ್ ಸರ್ಕಾರಕ್ಕೆ,ಡಿಕೆಶಿ ಸಂಪುಟಕ್ಕೆ ಗೌರವ ಬರಲಿದೆ.ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಬೆಂಗಳೂರು,ದೆಹಲಿಯವರೆಗೂ ಕಾರ್ಯಕರ್ತರು ವರಿಷ್ಠರ ಮೇಲೆ ಒತ್ತಡ ಹಾಕಲು ಹಿಂಜರಿಯುವುದಿಲ್ಲ.ಪಕ್ಷದಿoದ ನಾಡಗೌಡರನ್ನು ಗುರುತಿಸದಿದ್ದರೆ ಸಾಮೂಹಿಕವಾಗಿ ಪಕ್ಷತ್ಯಾಗ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವಾಯ್.ಎಚ್.ವಿಜಯಕರ್,ಬಿ.ಎಸ್.ಪಾಟೀಲ ಯಾಳಗಿ, ಗ್ಯಾರಂಟಿ ಸಮೀತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ವರ್ತಕರಾದ ಶರಣು ದೇಗಿನಾಳ,ಬಸವರಾಜ ಗೋನಾಳ, ಯುವ ಮುಖಂಡ ತಿಪ್ಪಣ್ಣ ದೊಡಮನಿ,ಮಹಿಳಾ ಘಟಕದ ಅಧ್ಯಕ್ಷೆ ಅಕ್ಷತಾ ಚಲವಾದಿ,ಸರಸ್ವತಿ ಪೀರಾಪೂರ,ಮಹ್ಮದರಫೀಕ ಶಿರೋಳ ಮತ್ತಿತರರು ಮಾತನಾಡಿದರು.
ಬಸವೇಶ್ವರ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿದ ಕಾರ್ಯಕರ್ತರು,ನಾಡಗೌಡರಿಗೆ ಸಚಿವ ಸ್ಥಾನ ಈ ಬಾರಿ ನೀಡಲೇಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ತಂದರು. ಮುಖoಡರಾದ ಶ್ರೀಶೈಲ ಮರೋಳ, ರಾಜುಗೌಡ ಕೊಂಗಿ,ಬಸವರಾಜ ಇಸ್ಲಾಂಪೂರ,ಎ.ಗಣೇಶ ನಾರಾಯಣಸ್ವಾಮಿ,ಹೆಸ್ಕಾಂ ಗ್ರಾಹಕರ ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ,ಎಸ್ಸಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಚಲವಾದಿ,ಶರಣಬಸ್ಸು ಚಲವಾದಿ,ಹಣಮಂತ ಕುರಿ,ಹುಸೇನ್ ಮುಲ್ಲಾ, ಸಂಗಣ್ಣ ಮೇಲಿನಮನಿ,ಸದು ಮಠ,ಎಸ್.ಎಸ್.ಮಾಲಗತ್ತಿ,ಕೆ.ಎಸ್.ಪಾಟೀಲ ಜಮ್ಮಲದಿನ್ನಿ,ಅಶೋಕ ಚಟ್ಟೇರ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮಲ್ಲು ಅಪರಾಧಿ,ಅಮರೇಶ ಗೂಳಿ,ಬಾಪುಗೌಡ ಪೀರಾಪೂರ,ಮಹಿಳಾ ಘಟಕದ ಪದಾಧಿಕಾರಿಗಳಾದ ಕಮಲಾ ಭಜಂತ್ರಿ,ಹುಸೇನಬಿ ವಾಲೀಕಾರ,ನೀಲಮ್ಮ ಚಲವಾದಿ,ಮಾಬುಬಿ ಬಾಗವಾನ, ಸೇರಿದಂತೆ ಪ್ರತಿಭಟನೆಯಲ್ಲಿ ಮುದ್ದೇಬಿಹಾಳ,ತಾಳಿಕೋಟಿ,ನಾಲತವಾಡ ಭಾಗಗಳಿಂದ ಕಾಂಗ್ರೆಸ್ ಕಾರ್ಯಕರ್ತರು,ಮುಖಂಡರು,ನಾಡಗೌಡರ ಅಭಿಮಾನಿಗಳು ಭಾಗವಹಿಸಿದ್ದರು. ಬನಶಂಕರಿ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ಹಾಯ್ದು ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಮಾವೇಶ ನಡೆಸಲಾಯಿತು.ಡಿವೈಎಸ್‌ಪಿ ಚಂದ್ರಕಾoತ ನಂದರೆಡ್ಡಿ, ಸಿಪಿಐ ಮೊಹ್ಮದಫಸಿವುದ್ದೀನ, ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪರೆಡ್ಡಿ,ತಾಳಿಕೋಟಿ ಪಿಎಸ್‌ಐ ಜ್ಯೋತಿ ಖೋತ ಸೇರಿದಂತೆ ನಿಡಗುಂದಿ,ಕೊಲ್ಹಾರ,ಬ.ಬಾಗೇವಾಡಿ ಠಾಣೆಗಳಿಂದ ಪೊಲೀಸರು ಆಗಮಿಸಿ ಬಿಗಿ ಬಂದೋಬಸ್ತ್ ವಹಿಸಿದ್ದರು.

ಸ್ ಬಂದ್ ವೃದ್ಧರು,ಮಹಿಳೆಯರ ಪರದಾಟ: ಸಾರಿಗೆ ಘಟಕದಿಂದ ಹೊರ ಹೋಗುವ ಎಲ್ಲ ಬಹುತೇಕ ಮಾರ್ಗಗಳ ಬಸ್‌ಗಳನ್ನು ಊರಿನಿಂದ ಹೊರಗಡೆ ಎರಡು ಕಿ.ಮೀ ಅಂತರದಿoದ ಕಾರ್ಯಾಚರಣೆ ನಡೆಸಿದ್ದರಿಂದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸಬೇಕಾಯಿತು.ಮಹಿಳೆಯರು,ಸಣ್ಣ ಸಣ್ಣ ಮಕ್ಕಳನ್ನು ಕರೆತಂದಿದ್ದ ತಾಯಂದಿರು,ಸರಕು ಸರಂಜಾಮುಗಳನ್ನು ತಂದಿದ್ದ ಮಹಿಳೆಯರು,ಬೆಳಗ್ಗೆಯೇ ಕಾಲೇಜುಗಳಿಗೆ ಬಂದಿದ್ದ ವಿದ್ಯಾರ್ಥಿಗಳು ಕಿ.ಮಿ ಗಟ್ಟಲೇ ನಡೆದುಕೊಂಡು ಸಾಗಿ ಊರ ಹೊರಗಡೆ ಬಸ್ ನಿಲುಗಡೆ ಮಾಡಿದ್ದಲ್ಲಿಗೆ ತೆರಳಿದರು.ಕೆಲವರು ಈ ಬಂದ್ ಮಾಡಿದ್ದಕ್ಕೆ ಹಿಡಿಶಾಪ ಹಾಕಿದರು.

Latest News

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ ಆಡಳಿತ ವೈದ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆದೇಶಿಸಿದ್ದಾರೆ. ಮುದ್ದೇಬಿಹಾಳ ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾಗಿ ಪ್ರಭಾರ ಅಧಿಕಾರದಲ್ಲಿದ್ದ ಚಿಕ್ಕ ಮಕ್ಕಳ ತಜ್ಞ ವೈದ್ಯ ಡಾ.ಪರಶುರಾಮ ವಡ್ಡರ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಡಳಿತ ಪ್ರಭಾರ ಹುದ್ದೆಗೆ ವರ್ಗಾಯಿಸಿದ್ದು ಅಲ್ಲಿ ಪ್ರಭಾರ ಹುದ್ದೆಯಲ್ಲಿದ್ದ ಪ್ರಸೂತಿ ತಜ್ಞ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಕಂದಗನೂರಿನಲ್ಲಿ ರೈತನ ಮೇಲೆ ಹುಚ್ಚನಾಯಿ ದಾಳಿ

ಮುದ್ದೇಬಿಹಾಳ : ಹುಚ್ಚು ನಾಯಿಯೊಂದು ಮನೆಯ ಮುಂದೆ ಮಲಗಿದ್ದ ರೈತನ ಮೇಲೆ ಭೀಕರವಾಗಿ ದಾಳಿ ಮಾಡಿ ಕಚ್ಚಿ ಪರಾರಿಯಾಗಿರುವ ಘಟನೆ ತಾಲ್ಲೂಕಿನ ಕಂದಗನೂರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಕಂದಗನೂರ ಗ್ರಾಮದ ರೈತ ಮಕ್ತುಮಸಾಬ ರಹಿಮಾನಸಾಬ ಮೂಕಿಹಾಳ(೬೮) ಹುಚ್ಚು ನಾಯಿ ಕಡಿತದಿಂದ ಗಾಯಗೊಂಡಿರುವ ವ್ಯಕ್ತಿ.ಮನೆ ಮುಂದೆ ಮಲಗಿದ್ದಾಗ ಎಲ್ಲಿಂದಲೋ ಬಂದಿದ್ದ ಹುಚ್ಚು ನಾಯಿ ದಾಳಿ ಮಾಡಿದೆ.ಮನಬಂದAತೆ ರೈತನ ಹೊಟ್ಟೆ ಪಕ್ಕದಲ್ಲಿ,ಕೈಗೆ ಭೀಕರವಾಗಿ ಕಚ್ಚಿದೆ.ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಮಕ್ತುಮಸಾಬನನ್ನು ಮುದ್ದೇಬಿಹಾಳ ಸರಕಾರಿ