MLA Pradeep Eshwar with Megastar Chiranjeevi

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಮೆಗಾಸ್ಟಾರ್ ಚಿರಂಜೀವಿ ಜತೆಗೆ ಶಾಸಕ ಪ್ರದೀಪ್ ಈಶ್ವರ್ ಗೆ ಇದನ್ನು ಮಾಡುವ ಆಸೆಯಂತೆ (ವಿಡಿಯೋ ನೋಡಿ)

ಚಿಕ್ಕಬಳ್ಳಾಪುರ: ‘ರಾಜ್ಯ ರಾಜಕಾರಣದಲ್ಲಿ ಕೆಲವರನ್ನು ನಾನು ಡ್ಯಾನ್ಸ್ ಮಾಡಿಸಿದ್ದೇನೆ. ನನ್ನ ನೆಚ್ಚಿನ ನಾಯಕ ಮೆಗಾಸ್ಟಾರ್ ಚಿರಂಜೀವಿ ಜತೆಗೆ ಡ್ಯಾನ್ಸ್ ಮಾಡಬೇಕು ಎಂಬುದು ಬಹುಕಾಲದ ನನ್ನ ಹೆಬ್ಬಯಕೆಯಾಗಿದೆ. ಇಂತಹ ಅವಕಾಶ ದೊರೆತರೆ ನನ್ನ ಜೀವನದ ಬಹುದೊಡ್ಡ ಸೌಭಾಗ್ಯವಾಗಲಿದೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಅವರು ಬಣ್ಣದ ಲೋಕಕ್ಕೆ ಎಂಟ್ರಿ ಕೊಡುವ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ತ್ರಿಚಕ್ರವಾಹನ ವಿತರಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿರಂಜೀವಿ ಚಿತ್ರದಲ್ಲಿ ಅಭಿನಯ:

ತೆಲುಗು ಚಿತ್ರರಂಗದ ಹೆಸರಾಂತ ನಟ ಮೆಗಾಸ್ಟಾರ್ ಚಿರಂಜೀವಿ ಅವರು ಸದ್ಯ ವಿಶ್ವಂಬರ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಾದ ನಂತರ ಸೆಟ್ಟೇರಲಿರುವ ಅವರ ಮುಂದಿನ ಚಿತ್ರದಲ್ಲಿ ತಾವು ನಟಿಸುವ ಅವಕಾಶದ ಬಗ್ಗೆ ಚರ್ಚೆ ನಡೆದಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ನಾನು ಮೆಗಾಸ್ಟಾ‌ರ್ ಚಿರಂಜೀವಿ ಅವರ ಬಹು ದೊಡ್ಡ ಅಭಿಮಾನಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ಕಾರಣ ನಾನು ಅವರ ಸಮುದಾಯದ ಹುಡುಗ ಎಂಬುದೇ ಆಗಿದೆ.ನಾನು ಶಾಸಕನಾದಾಗಲೂ ಹೈದರಾಬಾದ್‌ನ ಮನೆಗೆ ಕರೆಸಿದ್ದರು. ಅವರ ಸಹೋದರ ಪವನ್ ಕಲ್ಯಾಣ್ ಅವರು ಗೆದ್ದಾಗ ನಾನು ಕೂಡ ಫೋನ್ ಮಾಡಿ ಶುಭಾಶಯ ಹೇಳಿದ್ದೆ. ಅವರ ತೆಲುಗು ಸಿನಿಮಾದಲ್ಲಿ ನಟನೆಯ ಅವಕಾಶದ ಬಗ್ಗೆ ಚರ್ಚೆ ನಡೆದಿರುವುದು ನಿಜ ಎಂದರು.

ಇದನ್ನೂ ಓದಿ: Crime news: ಪತ್ನಿಯನ್ನೇ 2 ತಿಂಗಳಿನಿಂದ ಶೆಡ್‌ನಲ್ಲಿ ಕೂಡಿ ಹಾಕಿದ ಪೊಲೀಸಪ್ಪ.. ಸಾಲದಕ್ಕೆ ಬೇರೆಯವರೊಂದಿಗೆ ಓಡಿ ಹೋಗಿದ್ದಾಳೆ ದೂರು ಕೊಟ್ಟ..!

ನನಗೆ ಚಿರಂಜೀವಿ ಅವರ ಜೊತೆ ಡ್ಯಾನ್ಸ್ ಮಾಡಬೇಕು ಎಂಬುದು ಆಸೆ. ಒಂದು ಸಣ್ಣ ಸ್ಟೆಪ್ ಹಾಕಲು ಅವಕಾಶ ಸಿಕ್ರೂ ಅದು ನನ್ನ ಸೌಭಾಗ್ಯ. ನಾನು ರಾಜಕಾರಣದಲ್ಲಿ ಕೆಲವರನ್ನ ಡ್ಯಾನ್ಸ್ ಮಾಡಿಸಿದ್ದೀನಿ. ಆದರೆ ಚಿರಂಜೀವಿ ಅವರ ಜೊತೆ ‘ಡ್ಯಾನ್ಸ್ ಮಾಡಿದ್ರೆ ಅದ ಅದು ನನಗೆ ಖುಷಿ ಅಂತಾ ಪರೋಕ್ಷವಾಗಿ ಸಂಸದ ಸುಧಾಕರ್‌ಗೆ ಟಾಂಗ್ ಕೊಟ್ಟರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ