Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ad
Ad

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

Ad
Ad

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500