Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ