Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ