Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ