Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು