Ilakal nagarasabhe news elected President and voice President with mla vijayananda kashappanavar

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

Ilakal nagarasabhe: ಬೇರೆ ಊರ ಗೌಡ ನಮ್ಮೂರಲ್ಲಿ ಕರ ಕಟ್ಟಕ ಗೂಟ..! ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ VIDEO

ಇಳಕಲ್: ನಗರಸಭೆ (Ilakal nagarasabhe) ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಬಾಗಲಕೋಟೆ ಜಿಲ್ಲೆಯ ಗಮನವನ್ನು ತನ್ನ ಕಡೆ ಸೆಳೆದುಕೊಂಡಿತ್ತು. ಕೇವಲ ಎಂಟು ಜನ ಸದಸ್ಯರನ್ನು ಹೊಂದಿದ್ದರೂ ಆಪರೇಷನ್ ಹಸ್ತದ ಮೂಲಕ 31 ಜನ ಸದಸ್ಯರ ನಗರಸಭೆಯನ್ನು ಕೈ ಪಡೆ ತನ್ನ ತೆಕ್ಕೆಗೆ ತೆಗೆದುಕೊಂಡು ಬೀಗಿದೆ.

18 ಮತಗಳನ್ನು ಪಡೆದು ಅಧಿಕಾರದ ಗದ್ದುಗೆ ಹಿಡಿದ ನಂತರ ಶಾಸಕ ವಿಜಯಾನಂದ ಕಾಶಪ್ಪನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಾಜಿ‌ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ವಿರುದ್ಧ ಏಕ‌ವಚನದಲ್ಲಿ ವಾಗ್ದಾಳಿ ನಡೆಸಿದರು.

Join Our Telegram: https://t.me/dcgkannada

“ಪರ ಊರ ಗೌಡ ನಮ್ಮೂರಲ್ಲಿ ಕರ ಕಟ್ಟುವ ಗೂಟ. ಅವನು ಲಿಂಗಸೂರು ಗೌಡ, ಲೆಕ್ಕಿಹಾಳ ಗೌಡ ಇರಬಹುದು. ನಮ್ಮೂರಲ್ಲಿ ಕರ ಕಟ್ಟುವ” ಎಂದು ದೊಡ್ಡನಗೌಡರ ಕುರಿತು ವ್ಯಂಗ್ಯವಾಡಿದರು.

“ಬಿಜೆಪಿಯ ದೂರಾಡಳಿತದಿಂದ ಬೇಸತ್ತ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಸಾಥ್ ನೀಡಿದ್ದಾರೆ. ಯಾವುದೇ ವ್ಯಕ್ತಿಗೆ ಸ್ವಾತಂತ್ರ್ಯ ಮುಖ್ಯ. ಅಲ್ಲಿ ಅವರಿಗೆ ಸ್ವತಂತ್ರ ಇರಲಿಲ್ಲ. ಆದ ಕಾರಣ ಕಾಂಗ್ರೆಸ್ ಸೇರಿದ್ದಾರೆ.” ಎಂದು ಆಪರೇಷನ್ ಹಸ್ತವನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಮರ್ಥನೆ ಮಾಡಿಕೊಂಡರು.

31 ಜನ ಸದಸ್ಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. 30 ಜನ ನಗರಸಭೆ ಸದಸ್ಯರು, ಒಬ್ಬರು ಶಾಸಕರು, ಒಬ್ಬರು ಲೋಕಸಭಾ ಸದಸ್ಯರು ಸೇರಿದಂತೆ ಒಟ್ಟು 32 ಮತಗಳು ಚಲಾವಣೆಗೊಂಡಿದ್ದು, 18 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದರು.

ಇದನ್ನೂ ಓದಿ: Devaraju Arasu: ಬಡವರಿಗೆ ಭೂಮಿ ನೀಡಿದ ಪುಣ್ಯತ್ಮ ಅರಸು – ತಹಶೀಲ್ದಾರ್ ನಿಂಗಪ್ಪ

ಎಂಟೆ ಎಂಟು ಸದಸ್ಯರನ್ನು ಹೊಂದಿದ್ದ ಕಾಂಗ್ರೆಸ್ ಅಧಿಕಾರ ಗದ್ದುಗೆ ಏರಿದ್ದು ಮಾತ್ರ ರೋಚಕ ಕಹನಿ. ಆಪರೇಷನ್ ಹಸ್ತ ಮಾಡಿದ ಶಾಸಕ ಕಾಶಪ್ಪನವರ್, 6 ಜನರ ಬಿಜೆಪಿ ಸದಸ್ಯರನ್ನು ಸೆಳೆಯುವಲ್ಲಿ ಯಶಸ್ಸು ಕಂಡರು. ಇದರೊಂದಿಗೆ ಜೆಡಿಎಸ್ ನ ಇಬ್ಬರು ಮತ್ತು ಪಕ್ಷೇತರ ಸದಸ್ಯರನ್ನು ಸೆಳೆದುಕೊಂಡ ಕೈ ನಾಯಕರು ಇಳಕಲ್ ನಗರಸಭೆಯ ಅಧಿಕಾರದ ಗದ್ದುಗೆ ಏರಿದರು.

ಈ ಮೂಲಕ ಹೆಚ್ಚು ಸದಸ್ಯರನ್ನು ಹೊಂದಿದ್ದರೂ ನಗರಸಭೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾದ ಬಿಜೆಪಿ ‌ನಾಯಕರು ಮುಖಭಂಗ ಅನುಭವಿಸಿದರು.

ನಗರಸಭೆಯ ಅಧ್ಯಕ್ಷೆಯಾಗಿ ಸುಧಾರಾಣಿ, ಉಪಾಧ್ಯಕ್ಷೆಯಾಗಿ ಕಾಳಮ್ಮ ಜಕ್ಕಾ ಆಯ್ಕೆಯಾಗಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ