ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡ ರೈತ ಯುವಕರ ಆಕ್ರೋಶದ ಕಟ್ಟೆ ಹೊಡೆಯುತ್ತಿದೆ.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ಇನ್ನೇನು ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ ಸುತ್ತಮುತ್ತಲ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ಇನ್ನೂ ಕನಸಾಗಿ ಉಳಿದ ನೀರಾವರಿ ವ್ಯವಸ್ಥೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ…..?

‌ಕಾರಣ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೋ ಅಥವಾ ನಮ್ಮೂರಿನ ಅಂಗಡಗೇರಿ ಗ್ರಾಮದ ಯಾವ ಜನಪ್ರತಿನಿಧಿಗಳಿಗೂ ಅರವಿಗೆ ಬಂದಿಲ್ಲವೊ ಅಥವಾ ನಮ್ಮ ಊರು ಅತ್ಯಂತ ಎತ್ತರ ಪ್ರದೇಶದಲ್ಲಿದೆಯೊ ಅಥವಾ ಶಾಸಕರಿಗೆ ಇಚ್ಚಾಶಕ್ತಿಯ ಕೊರತೆಯೋ ಅಥವಾ ನಮ್ಮ ಊರಿನಿಂದ ಯಾರೊಬ್ಬರೂ ಮತದಾನ ಮಾಡಿಲ್ಲವೆಂದು ಸಂಶಯವಿದೆಯಾ….? ಎಂಬುವುದನ್ನೂ ಗ್ರಾಮದ ಜನ ಚರ್ಚಿಸುತ್ತಿದ್ದಾರೆ.

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ.ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಕಣ್ಣಾಯಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ.ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಕಣ್ಣು ಹಾಯಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿ ಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದು ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದಾರೆ.

Latest News

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ

ಬಾಕಿ ಬಿಲ್ ಪಾವತಿಗೆ ಆಗ್ರಹ :                                             ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಬಾಕಿ ಬಿಲ್ ಪಾವತಿಗೆ ಆಗ್ರಹ : ಮಾ.6 ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಬೃಹತ್ ಹೋರಾಟ

ಮುದ್ದೇಬಿಹಾಳ : ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದೆರಡೂವರೆ ವರ್ಷಗಳಿಂದ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಎಸ್.ಎಸ್.ಎಲ್.ಸಿಯಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ರೈತಾಪಿ ಕುಟುಂಬದಲ್ಲಿ ಜನಿಸಿ ಗ್ರಾಮೀಣ ಪ್ರದೇಶದಲ್ಲಿ ಹಳ್ಳಿಯ ಮಕ್ಕಳಿಗೆ ಉತ್ತಮ ಶಿಕ್ಷಣ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ;                        ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಡಿಕ್ಕಿ; ಪರೀಕ್ಷೆ ಬರೆದು ಮರಳುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿಕೊಂಡು ಮರಳಿ ತಮ್ಮೂರಿಗೆ ಬೈಕ್ ಮೇಲೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳಿದ್ದ ಬೈಕ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಅಸುನೀಗಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬಿದರಕುಂದಿ ಗ್ರಾಮದ ಸಮೀಪದಲ್ಲಿ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಮುದ್ದೇಬಿಹಾಳ ಪಟ್ಟಣದ ಶಾಂತಲಾ ಪ್ರೌಢಶಾಲೆಯ ವಿದ್ಯಾರ್ಥಿ, ತಾಲ್ಲೂಕಿನ ಗೋನಾಳ ಪಿ.ಎನ್. ಗ್ರಾಮದ ನಿವಾಸಿ ಮಹೇಶ ಬಸಪ್ಪ ಮಾದರ(16)ಎಂದು ಗುರುತಿಸಲಾಗಿದೆ.