ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡ ರೈತ ಯುವಕರ ಆಕ್ರೋಶದ ಕಟ್ಟೆ ಹೊಡೆಯುತ್ತಿದೆ.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ಇನ್ನೇನು ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ ಸುತ್ತಮುತ್ತಲ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ಇನ್ನೂ ಕನಸಾಗಿ ಉಳಿದ ನೀರಾವರಿ ವ್ಯವಸ್ಥೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ…..?

‌ಕಾರಣ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೋ ಅಥವಾ ನಮ್ಮೂರಿನ ಅಂಗಡಗೇರಿ ಗ್ರಾಮದ ಯಾವ ಜನಪ್ರತಿನಿಧಿಗಳಿಗೂ ಅರವಿಗೆ ಬಂದಿಲ್ಲವೊ ಅಥವಾ ನಮ್ಮ ಊರು ಅತ್ಯಂತ ಎತ್ತರ ಪ್ರದೇಶದಲ್ಲಿದೆಯೊ ಅಥವಾ ಶಾಸಕರಿಗೆ ಇಚ್ಚಾಶಕ್ತಿಯ ಕೊರತೆಯೋ ಅಥವಾ ನಮ್ಮ ಊರಿನಿಂದ ಯಾರೊಬ್ಬರೂ ಮತದಾನ ಮಾಡಿಲ್ಲವೆಂದು ಸಂಶಯವಿದೆಯಾ….? ಎಂಬುವುದನ್ನೂ ಗ್ರಾಮದ ಜನ ಚರ್ಚಿಸುತ್ತಿದ್ದಾರೆ.

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ.ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಕಣ್ಣಾಯಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ.ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಕಣ್ಣು ಹಾಯಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿ ಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದು ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದಾರೆ.

Latest News

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮಠಗಳು ನಡೆಸುವ ಶೈಕ್ಷಣಿಕ,ಧಾರ್ಮಿಕ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮ ಮಾಡಬೇಕಿದೆ.ಮಾಧ್ಯಮ ಕ್ಷೇತ್ರದಲ್ಲಿರುವವರಲ್ಲಿ ಅಸೂಯೆ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,