ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಶಾಸಕರೇ ನಮ್ಮೂರಿಗೆ ನೀರಾವರಿ ಭಾಗ್ಯ ಯಾವಾಗ..? ಅಂಗಡಗೇರಿ ಗ್ರಾಮಸ್ಥರ ಆಕ್ರೋಶ

ಗೊಳಸಂಗಿ: ಇದು ಪ್ರಸ್ತುತ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸದ್ಯ ನಿಡಗುಂದಿ ತಾಲೂಕಿನ ಅಂಗಡಗೇರಿ ಗ್ರಾಮದ ರೈತರ ಹಾಗು ಯುವಕರ ಅಳಲು ಸುಮಾರು ಹತ್ತು ಹನ್ನೆರಡು ವರ್ಷಗಳಿಂದ ನಮ್ಮೂರಿಗೂ ಕೂಡ ನೀರಾವರಿ ಭಾಗ್ಯ ಬರುತ್ತದೆ ನಮ್ಮ ಬದುಕು ಕೂಡ ಹಸನಾಗುತ್ತದೆ ಎಂದು ಕಾಯ್ದುಕೊಂಡು ಕುಳಿತ ರೈತರಿಗೆ ಇನ್ನೂ ದೊರೆಯದ ನೀರಾವರಿ ಭಾಗ್ಯ ಪಟ್ಟಣದಲ್ಲಿ ನಿರುದ್ಯೋಗವನ್ನು ಅನುಭವಿಸಿ ತಮ್ಮುರಿನತ್ತ ಬಂದು ವ್ಯವಸಾಯ ಕೃಷಿ ಮಾಡಬೇಕೆಂಬ ಹಂಬಲವಿರುವ ಅನೇಕ ಯುವಕರಲ್ಲಿ ನಮ್ಮೂರಿಗೆ ನೀರಾವರಿ ಭಾಗ್ಯ ಇಂದಲ್ಲ ನಾಳೆ ಲಭಿಸುವುದು ಎಂಬ ಆಶಾಭಾವನೆ ಇಟ್ಟುಕೊಂಡ ರೈತ ಯುವಕರ ಆಕ್ರೋಶದ ಕಟ್ಟೆ ಹೊಡೆಯುತ್ತಿದೆ.

ಜನಪ್ರತಿನಿಧಿಗಳ ಹಾಗೂ ಶಾಸಕರ ಮುತ್ತಿಗೆ ಹಾಕುವ ಕಾಲ ಇನ್ನೇನು ದೂರವಿಲ್ಲ ಎಂಬ ಭಾವನೆ ರೈತ ಹಾಗೂ ಯುವಕರಲ್ಲಿ ಮೂಡುತ್ತಿದೆ ಸುತ್ತಮುತ್ತಲ ಎಲ್ಲ ಗ್ರಾಮಗಳಿಗೂ ನೀರಾವರಿ ವ್ಯವಸ್ಥೆ ಆದರೂ ಕೂಡ ಅಂಗಡಗೇರಿ ಗ್ರಾಮದ ಪಾಲಿಗೆ ಇನ್ನೂ ಕನಸಾಗಿ ಉಳಿದ ನೀರಾವರಿ ವ್ಯವಸ್ಥೆ.

ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಾವರಿಯ ಭಾಗ್ಯ ಇದೆ ತೆಲಗಿ, ಮಟ್ಟಿಹಾಳ,ಚೀರಲದಿನ್ನಿ, ಕೂಡಗಿ,ಮಸೂತಿ,ಮಲಘಾನ, ಸಿದ್ದನಾಥ ಕವಲಗಿ, ಅರಷಣಗಿ, ಗಣಿ, ಚೀಮ್ಮಲಗಿ, ವಂದಾಲ, ಈಗಾಗಲೇ ನೀರಾವರಿಯ ಭೂಮಿಗಳಾಗಿದ್ದು ಜಾಕ್ವೇಲ್ ಮುಖಾಂತರ ನೀರಾವರಿಯ ಸೌಲಭ್ಯವನ್ನು ಏಕೆ ಒದಗಿಸಲಾಗುತಿಲ್ಲ…..?

‌ಕಾರಣ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲವೋ ಅಥವಾ ನಮ್ಮೂರಿನ ಅಂಗಡಗೇರಿ ಗ್ರಾಮದ ಯಾವ ಜನಪ್ರತಿನಿಧಿಗಳಿಗೂ ಅರವಿಗೆ ಬಂದಿಲ್ಲವೊ ಅಥವಾ ನಮ್ಮ ಊರು ಅತ್ಯಂತ ಎತ್ತರ ಪ್ರದೇಶದಲ್ಲಿದೆಯೊ ಅಥವಾ ಶಾಸಕರಿಗೆ ಇಚ್ಚಾಶಕ್ತಿಯ ಕೊರತೆಯೋ ಅಥವಾ ನಮ್ಮ ಊರಿನಿಂದ ಯಾರೊಬ್ಬರೂ ಮತದಾನ ಮಾಡಿಲ್ಲವೆಂದು ಸಂಶಯವಿದೆಯಾ….? ಎಂಬುವುದನ್ನೂ ಗ್ರಾಮದ ಜನ ಚರ್ಚಿಸುತ್ತಿದ್ದಾರೆ.

ಸುತ್ತಮುತ್ತಲಿನ ಎಲ್ಲಾ ಗ್ರಾಮಗಳಿಗೂ ನೀರಾವರಿಯಾದರೂ ಕೂಡಾ ನಮ್ಮೂರಿಗೆ ಇನ್ನೂ ನೀರಾವರಿಯ ಸೌಲಭ್ಯ ದೊರಕುತ್ತಿಲ್ಲ.ನೀರಾವರಿ ಆದರೆ ರೈತರ ಬಾಳು ಹಸನಾಗುವುದು ಎಂಬ ಆಶಾಭಾವನೆಯೊಂದಿಗೆ ರೈತರು ಇನ್ನೂ ಕಾಲಕಳೆಯುತ್ತಿದ್ದಾರೆ. ಇನ್ನೂ ಆದಷ್ಟು ಬೇಗ ಸರ್ಕಾರ ಮತ್ತು ಶಾಸಕರು ನಮ್ಮೂರಿನತ್ತ ಕಣ್ಣಾಯಿಸಿ ರೈತರ ಗೊಳು ಆಲಿಸುವರೆಂದು ಅಂದುಕೊಂಡಿದ್ದೇವೆ.ಈ ತಾರತಮ್ಯವನ್ನು ಹೋಗಲಾಡಿಸಿ ಒಂದು ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಮಾಡುವುದನ್ನು ಬಿಟ್ಟು ಬಸವನ ಬಾಗೇವಾಡಿ ಹಾಗೂ ನಿಡುಗುಂದಿ ತಾಲೂಕು ಸಂಪೂರ್ಣ ನೀರಾವರಿ ಗ್ರಾಮಗಳನ್ನಾಗಿ ಮಾಡಬೇಕು ನೀರು ಪ್ರತಿಯೊಂದು ಗ್ರಾಮಕ್ಕೂ ಅತಿ ಅವಶ್ಯಕ ಕೃಷಿ ಜನ ಜಾನುವಾರುಗಳಿಗೆ. ನೀರು ಒದಗಿಸಿ ಆದಷ್ಟು ಬೇಗ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಕಣ್ಣು ಹಾಯಿಸಿ ಶೀಘ್ರದಲ್ಲಿ ಅಂಗಡಗೇರಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ನೀರಾವರಿ ಗೊಳಿಸಲು ಮತ್ತು ಅದಕ್ಕೆ ಬೇಕಾಗುವ ಎಲ್ಲಾ ತಯಾರಿಗಳನ್ನು ಶೀಘ್ರದಲ್ಲಿ ಮಾಡಬೇಕೆಂದು ರೈತರು ತಮ್ಮಲ್ಲಿ ಕಳಕಳಿಯಿಂದ ಕೇಳಿಕೊಳ್ಳುತ್ತಿದ್ದಾರೆ.

Latest News

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ :                ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಬಸ್ ನಿಲ್ದಾಣದ ಮೂತ್ರಾಲಯ ಅಶುಚಿತ್ವ : ಶಾಸಕರಿಗೆ ಮೊಬೈಲ್‌ನಲ್ಲಿ ಅವ್ಯವಸ್ಥೆ ದರ್ಶನ ಮಾಡಿಸಿದ ಪ್ರಯಾಣಿಕ..!

ಮುದ್ದೇಬಿಹಾಳ : ಬಸ್ ನಿಲ್ದಾಣದಲ್ಲಿ ಮೂತ್ರಾಲಯದ ಅವ್ಯವಸ್ಥೆಯನ್ನು ಯುವ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ದಲ್ಲಿ ಫೋಟೋ

ಈ ಬಸ್ ಬೆಲೆಯೇ 39 ಲಕ್ಷ ರೂ.!!                            ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಈ ಬಸ್ ಬೆಲೆಯೇ 39 ಲಕ್ಷ ರೂ.!! ಮುದ್ದೇಬಿಹಾಳ : ನಗರ ಸಾರಿಗೆ ಬಸ್‌ನಲ್ಲಿ ಏನೆಲ್ಲ ಸೌಲಭ್ಯವಿದೆ..?

ಮುದ್ದೇಬಿಹಾಳ : ಹೈಟೆಕ್ ಸೌಲಭ್ಯವುಳ್ಳ ನಗರ ಸಾರಿಗೆ ಎರಡು ಬಸ್‌ಗಳಿಗೆ ಭಾನುವಾರ ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಫೆ.19 ರಂದು ಅದ್ದೂರಿ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ವತಿಯಿಂದ ಫೆ. 19 ರಂದು ಛತ್ರಪತಿ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು. ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ :                                      ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಸೈನ್ಯಕ್ಕೆ ಮಹಿಳೆಯರ ಸೇರ್ಪಡೆ : ಸಮಾಜದಲ್ಲಿ ಸಮಾನತೆಯ ಪ್ರತೀಕ-ಅಮರೇಶ್ವರ ದೇವರು

ಮುದ್ದೇಬಿಹಾಳ : ಗಡಿಯಲ್ಲಿ ಸೇವೆ ಸಲ್ಲಿಸುವ ಸೇವೆ ಪುರುಷರಿಗಷ್ಟೇ ಸೀಮಿತವಾಗಿದ್ದ ಕಾಲಘಟ್ಟ ಬದಲಾಗಿದ್ದು ಇದೀಗ ಮಹಿಳೆಯರು ದೇಶದ ಗಡಿಯಲ್ಲಿ ನಿಂತು ಹೋರಾಟ ನಡೆಸಲು ಸನ್ನದ್ದರು ಎಂಬುದಕ್ಕೆ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವ ಸಹೋದರಿ ಆಯೇಷಾ ವಾಲೀಕಾರ ಅವರ ಸಾಧನೆಯೇ ನಿದರ್ಶನ ಎಂದು ಕಿಲ್ಲಾ ಹೊಸಮಠದ ಅಮರೇಶ್ವರ ದೇವರು ಹೇಳಿದರು. ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಅವರಿಗೆ ಪಟ್ಟಣದ ಸೈನಿಕ ಮೈದಾನದಲ್ಲಿ ಗುರುವಾರ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿಯಿಂದ