Modi government collapse in four months: kj jarg in kolara

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ನಾಲ್ಕು ತಿಂಗಳಲ್ಲಿ ಮೋದಿ ಸರ್ಕಾರ ಪತನ.. 15 ವರ್ಷ ರಾಹುಲ್ ಗೆ ಅಧಿಕಾರ..! ಸ್ಫೋಟಕ ಬಾಂಬ್ ಸಿಡಿಸಿದ ಸಚಿವ

ಕೋಲಾರ: ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ ಇನ್ನೂ ನಾಲ್ಕು ತಿಂಗಳಲ್ಲಿ ಕೇಂದ್ರ ಸರಕಾರವು ಪತನವಾಗಿ ಮೋದಿಯವರು ಅಧಿಕಾರ ಕಳೆದುಕೊಳ್ಳಲಿದ್ದು ದೇಶದಲ್ಲಿ ಮುಂದಿನ 15 ವರ್ಷ ರಾಹುಲ್ ಗಾಂಧಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಜನತೆ ಬಿಜೆಪಿಗೆ ಬುದ್ದಿಕಲಿಸಿದ್ದಾರೆ. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಎಂದುರು.

ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಲ್ಲ ಜಾಸ್ತಿ ದಿನವು ಅಂತಹ ರಾಜಕಾರಣ ಉಳಿಯಲ್ಲ ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯ ಪೂರ್ವದಿಂದಲೂ ಜಾತಿ ಧರ್ಮ, ಭಾಷೆಯ ಭೇಧವಿಲ್ಲದ ಪಕ್ಷವಾಗಿದೆ ಎಲ್ಲಾ ವರ್ಗಗಳ ವಿಶ್ವಾಸದಿಂದ ಬಡವರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗಿದೆ ಸುಮಾರು 70 ವರ್ಷಗಳ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಕಾಣಿಕೆ ಅಪಾರವಾಗಿದೆ ಬಿಜೆಪಿಯಂತೆ ನೇರವಾಗಿ ಅಧಿಕಾರಕ್ಕೆ ಬಂದಿಲ್ಲ ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳವಾಗಿದ್ದು ಕಾರ್ಯಕರ್ತರಿಂದ ನಾವು ಎಲ್ಲರೂ ನಾಯಕರಾಗಿದ್ದೇವೆ ಇಲ್ಲಿಗೆ ಬಂದಿದ್ದೇನೆ. ಪಕ್ಷಕ್ಕಾಗಿ ದುಡಿದವರಿಗೆ ಹಂತಹಂತವಾಗಿ ಅವಕಾಶಗಳು ಸಿಗಲಿದೆ ಅಧಿಕಾರಕ್ಕಾಗಿ ಪಕ್ಷ ಅಲ್ಲ ಅನ್ನೋದು ತಿಳಿಯಬೇಕು ಜನರ ಹಿತಕ್ಕಾಗಿ ಪಕ್ಷವಾಗಬೇಕು ತಾಳ್ಮೆಯಿಂದ ಇದ್ದರೆ ಖಂಡಿತವಾಗಿಯೂ ಅವಕಾಶಗಳು ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿದ್ದರೆ ಒಂದಲ್ಲ ಒಂದು ದಿನ ಅವಕಾಶಗಳು ಸಿಗಲಿದೆ ಎಂಬುದಕ್ಕೆ ಸಚಿವ ಕೆ.ಜೆ ಚಾರ್ಜ್ ಅವರು ಉದಾಹರಣೆ ಯುವ ಕಾಂಗ್ರೆಸ್ ಬ್ಲಾಕ್ ಮಟ್ಟದಿಂದ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ್ದು ಅವರಿಗೆ ಅವಕಾಶಗಳು ಬಂದಿವೆ. ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಪ್ತಮುಖ ಕಾರಣವಾಗಿ ಅಧಿಕಾರವಿರಲಿ ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದರು.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳ್ಮೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು.

ಇದನ್ನೂ ಓದಿ: Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು, ಸೀಸಂದ್ರ ಗೋಪಾಲಗೌಡ, ಪದವೀಧರ ಘಟಕದ ಜಿಲ್ಲಾ ಅಧ್ಯಕ್ಷ ಪಿ.ಎಸ್ ಸುಧೀರ್, ಮುಖಂಡರಾದ ಜಯದೇವ್, ರವಿರಾಮಸ್ವಾಮಿ, ಒಬಿಸಿ ಮಂಜುನಾಥ್, ರತ್ನಮ್ಮ, ಮೈಲಾಂಡಹಳ್ಳಿ ಮುರಳಿ, ಅಶ್ವಥ್ ರೆಡ್ಡಿ, ರಾಮಯ್ಯ, ಮುಂತಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು