More than 100 students are sick after consuming hot food

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಕುಷ್ಟಗಿ: ಅಕ್ಷರದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ–ಭೇದಿಯಿಂದ ಬಳಲಿ ಸುಸ್ತಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲ್ಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷತನದಿಂದ ಈ ದುರ್ಘಟನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ದೋಟಿಹಾಳ ಪ್ರಾಥಮಿಕ ಆರೋಗ್ಯಕ್ಕೆ 40ಕ್ಕೂ ಅಧಿಕ ವಿದ್ಯಾರ್ಥಿಗಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 500 ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ ತಾಸಿನ ಬಳಿಕ ಎಂದಿನಂತೆ ಶಾಲಾ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ.

ನಂತರ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಶಾಲೆಯಲ್ಲಿಯೇ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೆಲವರಲ್ಲಿ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರು ಹೆದರಿಕೊಂಡು ಗ್ರಾಮದಲ್ಲಿ ಇವರು ಟಾಟಾ ಎಸಿ, ಟಂಟಂ ಸೇರದಂತೆ ಇನ್ನಿತರ ವಾಹನಗಳಲ್ಲಿ ದೋಟಿಹಾಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಗೆ ಮಕ್ಕಳನ್ನು ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.ಕೂಡಲೇ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆಎಸ್ ರೆಡ್ಡಿ ಹಾಗೂ ದಂಡಿನ್ ಅವರ ನೇತೃತ್ವದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಯಾವುದೇ ವಿದ್ಯಾರ್ಥಿಗಳಿಗೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಅಧಿಕಾರಿ:

ಬಿಜಕಲ್ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಅಸ್ವಸ್ಥಗೊಂಡ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿ ಆನಂದ್ ಗೋಟರು ಗ್ರಾಮಕ್ಕೆ ಕುಷ್ಟಗಿಯ ಆಂಬುಲೆನ್ಸ್ ಸಮೇತ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಚಿಕಿತ್ಸೆ ಎಂದು ಆಸ್ಪತ್ರೆಗೆ ದಾಖಲಿಸಿ ಕೊಡುವ ಮೂಲಕ ಗ್ರಾಮದಲ್ಲಿಯೇ ಬಿಡು ಬಿಟ್ಟಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ಕ್ಷೇಮ ವಿಚಾರಿಸಿ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ವಿದ್ಯಾರ್ಥಿಗೆ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜಿಕಲ್ ಶಾಲೆಯಲ್ಲಿ 500 ಕ್ಕೆ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿದ್ದು ಆದರೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಧ್ಯಾಹ್ನ 4 ಗಂಟೆಯ ನಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು ಕೂಡಲೇ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಬಿಸಿಯೂಟ ಸಾಂಬಾರಿಗೆ ಬಳಸಲಾದ ಕಾರು ಪುಡಿಯಲ್ಲಿ ವ್ಯತ್ಯಾಸವಾಗಿದ್ದು ಈ ಬಗ್ಗೆ ಕಾರಣ ಕೇಳಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ಬಿಒಒ
ಸುರೇಂದ್ರ ‌ಕಾಂಬ್ಳೆ ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಗೆಂದು ಕುಷ್ಟಗಿ ಹಾಗೂ ದೋಟಿಹಾಳ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗಿದೆ ಯಾವುದೇ ರೀತಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದಿಲ್ಲ ಎಂದು ತಾಲೂಕು ಆರೋಗ್ಯ ಅಧಿಕಾರಿ ಆನಂದ ಗೋಟರು ಹೇಳಿದ್ದಾರೆ.

Latest News

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು:                      ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳಕ್ಕೆ ಸರ್ಕಾರಿ ಐಟಿಐ ತಂದ ಶಾಸಕರು: ಸೆ.3 ರಂದು 8.63 ಕೋಟಿ ರೂ ಕಾಮಗಾರಿಗೆ ಚಾಲನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿದ್ದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರ ಬಿಟ್ಟರೆ ಮತ್ತೊಂದು

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಶಿಕ್ಷಣ,ಆರ್ಥಿಕ  ಸಬಲತೆಗೆ ಒತ್ತು ನೀಡಿ:                                       ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಶಿಕ್ಷಣ,ಆರ್ಥಿಕ ಸಬಲತೆಗೆ ಒತ್ತು ನೀಡಿ: ಸಮಾಜದ ಋಣ ತೀರಿಸುವ ಕಾರ್ಯ ಮಾಡೋಣ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಹಿಂದುಳಿದ ಸಮಾಜದಲ್ಲಿ ಜನಿಸಿದ್ದರೂ ಶಿಕ್ಷಣದಲ್ಲಿ ನಮ್ಮವರು ಎಂದಿಗೂ ಹಿಂದೆ ಬಿದ್ದಿಲ್ಲ.ಶಿಕ್ಷಣದೊಂದಿಗೆ ಜನಾಂಗವನ್ನು ಆರ್ಥಿಕ ಸಬಲತೆಯತ್ತ ಕೊಂಡೊಯ್ಯುವ ಕಾರ್ಯ ಸಮಾಜದ ಬಾಂಧವರು ಮಾಡಬೇಕು ಎಂದು ಮುದ್ದೇಬಿಹಾಳ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಭಾನುವಾರ ದೇವಾಂಗ ಸಮಾಜ ಹಾಗೂ ದೇವಾಂಗ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದುಳಿದ ವರ್ಗದವರ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿರುವ ನನಗೆ ನಮ್ಮ ಜನಾಂಗದವರು

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಹುಲ್ಲೂರ ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ವೀರಾಗ್ರಣಿ ಪ್ರಶಸ್ತಿ

ಮುದ್ದೇಬಿಹಾಳ : ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಹುಲ್ಲೂರು ಗ್ರಾಮದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಸತತ ಎರಡನೇ ಬಾರಿಗೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಕ್ರೀಡಾಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದಲ್ಲಿ ಕಬಡ್ಡಿ ಪ್ರಥಮ, ವಾಲಿಬಾಲ್ ಪ್ರಥಮ, ರಿಲೇ ಪ್ರಥಮ, ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ, 400 ಮೀ. ಓಟದಲ್ಲಿ ಪ್ರಥಮ, 600