More than 100 students are sick after consuming hot food

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ..!

ಕುಷ್ಟಗಿ: ಅಕ್ಷರದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ವಾಂತಿ–ಭೇದಿಯಿಂದ ಬಳಲಿ ಸುಸ್ತಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲ್ಲೂಕಿನ ಬಿಜಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡುಗೆ ಸಿಬ್ಬಂದಿಯ ನಿರ್ಲಕ್ಷತನದಿಂದ ಈ ದುರ್ಘಟನೆಯಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ದೋಟಿಹಾಳ ಪ್ರಾಥಮಿಕ ಆರೋಗ್ಯಕ್ಕೆ 40ಕ್ಕೂ ಅಧಿಕ ವಿದ್ಯಾರ್ಥಿಗಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬಿಜಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ 500 ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿ ತಾಸಿನ ಬಳಿಕ ಎಂದಿನಂತೆ ಶಾಲಾ ಶಾಲೆ ಮುಗಿಸಿಕೊಂಡು ಮನೆಗಳಿಗೆ ವಾಪಸ್ಸಾಗಿದ್ದಾರೆ.

ನಂತರ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಉಂಟಾಗಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ತಾಸಿನ ಬಳಿಕ ಶಾಲೆಯಲ್ಲಿಯೇ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೆಲವರಲ್ಲಿ ವಾಂತಿ–ಭೇದಿ, ಕೈಕಾಲು ಸೆಳೆತ, ತಲೆಸುತ್ತು ಸೇರಿದಂತೆ ಸಣ್ಣಪುಟ್ಟ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪಾಲಕರು ಹೆದರಿಕೊಂಡು ಗ್ರಾಮದಲ್ಲಿ ಇವರು ಟಾಟಾ ಎಸಿ, ಟಂಟಂ ಸೇರದಂತೆ ಇನ್ನಿತರ ವಾಹನಗಳಲ್ಲಿ ದೋಟಿಹಾಳ ಹಾಗೂ ಕುಷ್ಟಗಿಯ ಸಾರ್ವಜನಿಕ ಆಸ್ಪತ್ರೆಗೆ ಮಕ್ಕಳನ್ನು ಕರೆತಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.ಕೂಡಲೇ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೆಎಸ್ ರೆಡ್ಡಿ ಹಾಗೂ ದಂಡಿನ್ ಅವರ ನೇತೃತ್ವದಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಯಾವುದೇ ವಿದ್ಯಾರ್ಥಿಗಳಿಗೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಅಧಿಕಾರಿ:

ಬಿಜಕಲ್ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಅಸ್ವಸ್ಥಗೊಂಡ ಬಗ್ಗೆ ತಾಲೂಕು ಆರೋಗ್ಯ ಅಧಿಕಾರಿ ಆನಂದ್ ಗೋಟರು ಗ್ರಾಮಕ್ಕೆ ಕುಷ್ಟಗಿಯ ಆಂಬುಲೆನ್ಸ್ ಸಮೇತ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳನ್ನು ಚಿಕಿತ್ಸೆ ಎಂದು ಆಸ್ಪತ್ರೆಗೆ ದಾಖಲಿಸಿ ಕೊಡುವ ಮೂಲಕ ಗ್ರಾಮದಲ್ಲಿಯೇ ಬಿಡು ಬಿಟ್ಟಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ವಿದ್ಯಾರ್ಥಿಗಳ ಆರೋಗ್ಯ ಕ್ಷೇಮ ವಿಚಾರಿಸಿ ವೈದ್ಯರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ ವಿದ್ಯಾರ್ಥಿಗೆ ಯಾವುದೇ ರೀತಿ ತೊಂದರೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜಿಕಲ್ ಶಾಲೆಯಲ್ಲಿ 500 ಕ್ಕೆ ಹೆಚ್ಚು ವಿದ್ಯಾರ್ಥಿಗಳು ಬಿಸಿಯೂಟ ಸೇವನೆ ಮಾಡಿದ್ದು ಆದರೆ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮಧ್ಯಾಹ್ನ 4 ಗಂಟೆಯ ನಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು ಕೂಡಲೇ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದೆ. ಬಿಸಿಯೂಟ ಸಾಂಬಾರಿಗೆ ಬಳಸಲಾದ ಕಾರು ಪುಡಿಯಲ್ಲಿ ವ್ಯತ್ಯಾಸವಾಗಿದ್ದು ಈ ಬಗ್ಗೆ ಕಾರಣ ಕೇಳಿ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಅಡಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ಬಿಒಒ
ಸುರೇಂದ್ರ ‌ಕಾಂಬ್ಳೆ ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ಗೆಂದು ಕುಷ್ಟಗಿ ಹಾಗೂ ದೋಟಿಹಾಳ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆ ನೀಡಲಾಗಿದೆ ಯಾವುದೇ ರೀತಿ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವುದಿಲ್ಲ ಎಂದು ತಾಲೂಕು ಆರೋಗ್ಯ ಅಧಿಕಾರಿ ಆನಂದ ಗೋಟರು ಹೇಳಿದ್ದಾರೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ