Muda case AICC President Mallikarjun Kharge

Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ? ರಾಜೀನಾಮೆಗೆ ಸೂಚಿಸುತ್ತಾರಾ?

Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ? ರಾಜೀನಾಮೆಗೆ ಸೂಚಿಸುತ್ತಾರಾ?

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ‌ ಅವರ ಬೆನ್ನಿಗೆ ನಿಂತಿದೆ.

Join Our telegram: https://t.me/dcgkannada

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.

ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.

ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ‌ ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ‌ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು