Muda case DCM DK Shivakumar press meet in Bengaluru

Muda case : ಸಿಎಂ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

Muda case : ಸಿಎಂ ರಾಜೀನಾಮೆ.. ಡಿಕೆಶಿ ಮಹತ್ವದ ಹೇಳಿಕೆ..

ಬೆಂಗಳೂರು : ಮುಡಾ ಪ್ರಕರಣ (Muda case)ದಲ್ಲಿ ಸಿಎಂ ಸಿದ್ದರಾಮಯ್ಯ‌ (Siddaramaiah) ರಾಜೀನಾಮೆಗೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸುದ್ದಿಗೋಷ್ಠಿ ನಡೆಸಿ ಮಹತ್ವದ ಹೇಳಿಕೆ ನೀಡಿ, ಆದೇಶವೊಂದನ್ನು ಹೊರಡಿಸಿದ್ದಾರೆ.

Join Our Telegram: https://t.me/dcgkannada

ಮುಡಾ ಪ್ರಕರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಇಡೀ ರಾಜ್ಯದ್ಯಾಂತ ಕಾಂಗ್ರೆಸ್‌ ನ ಹೋರಾಟದ ಕಿಚ್ಚು ಭುಗಿಲೆದ್ದಿದೆ.

ಇನ್ನು, ರಾಜ್ಯಪಾಲರ ಈ ನಡೆಯನ್ನು ವಿರೋಧಿಸಿ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆ.19ರಂದು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವಂತೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾ‌ರ್ ಕರೆ ನೀಡಿದ್ದಾರೆ.

ರಾಜ್ಯಪಾಲರು ಬಿಜೆಪಿ ಪರ ಧೋರಣೆ ಅನುಸರಿಸಿದ್ದು, ಸಿಎಂ ಸಿದ್ದರಾಮಯ್ಯ‌ ರಾಜೀನಾಮೆ ನೀಡುವ ಅಗತ್ಯ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಮತ್ತು ಎಲ್ಲಾ ಶಾಸಕರೂ ಸಿಎಂಗೆ ಬೆಂಬಲವಾಗಿ ನಿಂತು ಹೋರಾಟ ಮಾಡುತ್ತೆವೆ. ಈ ನಿಟ್ಟಿನಲ್ಲಿ ಆ.19ರಂದು ಪ್ರತಿಭಟನೆಗೆ ಕರೆ ಕೆಪಿಸಿಸಿಯಿಂದ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Suicide case: ಮೈಮೇಲೆ ಡೀಸೆಲ್‌ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ಪ್ರಾಸಿಕ್ಯೂಷನ್ ವಿರೋಧಿಸಿ ಈಗಾಗಲೇ ಸಿಎಂ ಬೆನ್ನಿಗೆ ಇರುವುದಾಗಿ ಸಚಿವ ಸಂಪುಟ, ಶಾಸಕರು ಮಾತ್ರವಲ್ಲ ಹೈಕಮಾಂಡ್ ನಾಯಕರು ಅಭಯ ನೀಡಿದ್ದಾರೆ. ಅಲ್ಲದೇ ಕಾನೂನು ಪ್ರಕಾರ ಹೋರಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

CM Siddaramaiah ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ.. ದೂರುದಾರರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಹೇಳಿದ್ದೇನು?

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ ವಿರುದ್ಧದ ದೂರದಾರ ಮೈಸೂರು ಕೃಷ್ಣಮಯಿ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ ಅವರು ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ನಮ್ಮ ಕೋರಿಕೆ ಇರುವುದು ಸಿಬಿಐ ತನಿಖೆಗೆ ಅಥವಾ ಸ್ವತಂತ್ರ ತನಿಖೆಗೆ ವಹಿಸಿ ಕ್ರಮ ಕೈಗೊಳ್ಳಬೇಕು ಎನ್ನುವುದು. ಈ ಕುರಿತು ಕೋರ್ಟ್ ಏನು ಆದೇಶ ನೀಡುತ್ತದೆ ಎಂಬುದು ಮುಖ್ಯ” ಎಂದಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈ ಪ್ರಕರಣ ಖಾಸಗಿ ದೂರಿನ ವಿಚಾರಣೆಯನ್ನು ಆ.20ಕ್ಕೆ ಮುಂದೂಡಿತ್ತು. ಈಗ ರಾಜ್ಯಪಾಲರೇ ತನಿಖೆಗೆ ಅನುಮತಿ ನೀಡಿರುವುದರಿಂದ ವಿಚಾರ ಅಗತ್ಯವಿಲ್ಲ. ಕೋರ್ಟ್ ಆದೇಶವನ್ನು ಮಾತ್ರ ಎದುರು ನೀಡುತ್ತಿದ್ದೆವೆ” ಎಂದು ಖಾಸಗಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.

ಏತನ್ಮಧ್ಯೆ, ಸಿಎಂ ಸಿದ್ದರಾಮಯ್ಯ‌ ಅವರ ತಂಡವೂ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಸಚಿವರು, ಸಿದ್ದರಾಮಯ್ಯ‌ ಆಪ್ತರು ಚರ್ಚೆ ನಡೆಸುತ್ತಿದ್ದಾರೆ.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ