Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ