Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು