Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ