Muda case: Governor did not mean to put CM in jail: R. Ashoka Clarity

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

Muda case: ಸಿಎಂ‌ ಅವರನ್ನು ಜೈಲಿಗೆ ಹಾಕಿ ಎಂದಿಲ್ಲ: ಆರ್. ಅಶೋಕ ಕ್ಲಾರಿಟಿ

ಮಂಡ್ಯ: ಮುಡಾ ಹಗರಣ(Muda case)ದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashok) ಆರೋಪಿಸಿದರು‌.

Join Our Telegram: https://t.me/dcgkannada

ಮಂಡ್ಯದಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ(CBI) ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿದಾಗ ಮಾತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಾತಿ ನೆನಪಾಗುತ್ತದೆ. ಇವರು 14 ಸೈಟು ನುಂಗಿದ ಕೂಡಲೇ ಹಿಂಬಾಲಕರು ನೂರಾರು ಸೈಟುಗಳನ್ನು (Muda case) ನುಂಗಿದ್ದಾರೆ. ಇವರದ್ದೇ ಹಿಂಬಾಲಕರಾದ ಮರಿಗೌಡರೇ ಪತ್ರ ಬರೆದು ಅಕ್ರಮವಾಗಿದೆ ಎಂದು ಹೇಳಿದ್ದರು. ಅದನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು ಆರ್‌ಟಿಐ ಮೂಲಕ ಹೊರತೆಗೆದಾಗ ಎಲ್ಲವೂ ಬಯಲಾಗಿದೆ. ಆದರೆ, ಸಿಎಂ ಸಿದ್ದರಾಮಯ್ಯ ಒಂದೂ ಸೈಟು ಅಕ್ರಮವಾಗಿ ಪಡೆದಿಲ್ಲ ಎಂದು ಹೇಳಿದ್ದಾರೆ ಎಂದರು.

ಈಗ ವೈಟ್‌ನರ್‌ ಅಕ್ರಮ ಬಯಲಾಗಿದೆ. ದಾಖಲೆಗಳಲ್ಲಿ ವೈಟ್‌ನರ್‌ ಹಾಕಿ ಕೆಲವು ಅಂಶಗಳನ್ನು ಮರೆಮಾಚಲಾಗಿದೆ. ಏನಾದರೂ ತಪ್ಪಾದಾಗ ಅದರ ಮೇಲೆ ಪೆನ್‌ನಲ್ಲಿ ಗೆರೆ ಎಳೆದರೆ ಸಾಕಿತ್ತು. ಆದರೆ ವಿಷಯವನ್ನು ಮುಚ್ಚಿಹಾಕಲು ವೈಟ್‌ನರ್‌ ಬಳಸಿದ್ದಾರೆ. ವಿಜಯನಗರದಲ್ಲೇ ನಿವೇಶನ ಬೇಕು ಎಂದು ಸಿಎಂ ಪತ್ನಿ ಬರೆದಿದ್ದಾರೆ. ಅದಕ್ಕೆ ವೈಟ್‌ನರ್‌ ಹಚ್ಚಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದಾಖಲೆ ತಿದ್ದಿದ್ದಾರೆ ಎಂದು ದೂರಿದರು.

ಜೈಲಿಗೆ ಹಾಕಿ ಎಂದಿಲ್ಲ:

ರಾಜ್ಯಪಾಲರು ದೂರನ್ನು ಆಧರಿಸಿ ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಹಾಕಿಸಿಲ್ಲ. ತನಿಖೆ ಮಾಡಿ ಎಂದಿದ್ದಕ್ಕೆ ಕಾಂಗ್ರೆಸ್‌ ನಾಯಕರು ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಪ್ರಮಾಣ ವಚನ ಬೋಧಿಸಿದ್ದೇ ರಾಜ್ಯಪಾಲರು. ಅಂತಹವರು ತನಿಖೆ ಮಾಡಿ ಎಂದಿದ್ದನ್ನು ವಿರೋಧಿಸಿದರೆ ಅದು ಸರ್ವಾಧಿಕಾರಿ ಧೋರಣೆಯಾಗುತ್ತದೆ. ಅದು ತುಘಲಕ್‌ ದರ್ಬಾರ್‌ ಆಗುತ್ತದೆ. ಸಾಂವಿಧಾನಿಕವಾಗಿ ದೊಡ್ಡ ಹುದ್ದೆಯಲ್ಲಿರುವವರಿಗೆ ಕೀಳು ಮಾತುಗಳಿಂದ ನಿಂದಿಸುವುದು ಅಕ್ಷಮ್ಯ ಅಪರಾಧ. ಇದು ದಲಿತರಿಗೆ ಮಾಡುವ ಅಪಮಾನ. ಇದಕ್ಕಾಗಿ ಕಾಂಗ್ರೆಸ್‌ ಕ್ಷಮೆ ಯಾಚಿಸಬೇಕು ಎಂದರು.

ಇದನ್ನೂ ಓದಿ: Viral video: ಹೆಂಗಸಿನ ಮೇಲೆ ವ್ಯಾಮೋಹವಿದ್ದರೆ ನಮ್ಮ ಬಳಿ ಬನ್ನಿ: ರೆಡ್ ಲೈಟ್ ಏರಿಯಾ ಮಹಿಳೆಯ ಆಕ್ರೋಶ..!

ಬಿಜೆಪಿ ಸರ್ಕಾರ 40% ಕಮಿಷನ್‌ ಪಡೆದಿದೆ ಎಂದು ಕಾಂಗ್ರೆಸ್‌ ಸುಳ್ಳು ಆರೋಪ ಮಾಡಿತ್ತು. ಅದಕ್ಕಾಗಿ ಪ್ರಕರಣ ದಾಖಲಿಸಿದ್ದು, ಅದರ ಜಾಮೀನಿನ ಮೇಲೆ ಕಾಂಗ್ರೆಸ್‌ ನಾಯಕರು ಹೊರಗೆ ಓಡಾಡುತ್ತಿದ್ದಾರೆ ಎಂದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ