Muda case CM Siddaramaiah vs BY Vijayendra

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

Muda case: ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಸಿ‌ಎಂ‌ ಸಿದ್ದುಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಮೈಸೂರು ಮುಡಾ (Muda case) ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಗ್ರಹಿಸಿದ್ದಾರೆ.

Join Our Telegram: https://t.me/dcgkannada

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದು, “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ” ಎಂದು ಗಮನ ಸೆಳೆದಿದ್ದಾರೆ.

ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು.

ಇದನ್ನೂ ಓದಿ: Cubbon park: ವೃದ್ಧನಿಂದ ಹೀನ ಕೃತ್ಯ.. ಕಬ್ಬನ್ ಪಾರ್ಕ್‌ ನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ.. (ವೈರಲ್ ವಿಡಿಯೋ ನೋಡಿ)

ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

Muda case: ಕರ್ನಾಟಕಕ್ಕೆ ಬಂದ AICC ಅಧ್ಯಕ್ಷ ಖರ್ಗೆ.. ಸಿಎಂ ಸಿದ್ದು ಬೆನ್ನಿಗೆ ನಿಲ್ಲುತ್ತಾರಾ?

ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ (Muda case) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ‌ ಅವರ ಬೆನ್ನಿಗೆ ನಿಂತಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (Muda case) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಡುವೆ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಧೈರ್ಯ ತುಂಬಿದ್ದಾರೆ.

ನಿಮ್ಮ ಜೊತೆಗೆ ನಾವು ಇದ್ದೇವೆ ನೀವು ಧೈರ್ಯವಾಗಿರಿ, ಏನೇ ಆದರೂ ಕಾನೂನು ಹೋರಾಟ ಮಾಡೋಣ ಎಂದಿದ್ದಾರೆ. ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಲೂ ಸೂಚಿಸಿದ್ದಾರೆ ಎನ್ನಲಾಗಿದೆ.

ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದು, ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ದೂರದಾರ ಟಿ.ಜೆ. ಅಬ್ರಾಹಂಗೆ ರಾಜ್ಯಪಾಲರ ಕಚೇರಿಗೆ ಆಗಮಿಸಿ ದಾಖಲೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಾಹಂ ಮತ್ತಷ್ಟು ದಾಖಲೆಗಳನ್ನು ತೆಗೆದುಕೊಂಡು ರಾಜ್ಯಪಾಲರ ಕಚೇರಿ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.

Latest News

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮೈಲೇಶ್ವರದ ಬ್ರಿಲಿಯಂಟ್ ಶಾಲೆಯ ವಿದ್ಯಾರ್ಥಿನಿಗೆ ಪ್ರಶಸ್ತಿ; ಶಿಕ್ಷಣವನ್ನು ಯಾವತ್ತೂ ಹಣದಿಂದ ಅಳೆಯಬೇಡಿ-ಬಸಯ್ಯ ಮಠ

ಮುದ್ದೇಬಿಹಾಳ : ಹೆತ್ತ ತಂದೆ ತಾಯಿಗೆ, ಬೆಳೆಸಿದ ಗುರುವಿಗೆ ಹೆಸರು ತರುವುದು ಅವರ ಉಸಿರು

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು ಬೆಂಬಲಿಸುವ ಕಾರ್ಯ ಸಮಾಜ,ಸಂಘಟನೆಗಳು ಮಾಡಬೇಕು ಎಂದು ಸಮಾಜ ಸೇವಕ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ವಿದ್ಯಾಸ್ಪೂರ್ತಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಚೀನ ಕಾಲದ ಗುರುಕುಲ ಪದ್ಧತಿಯಲ್ಲಿ ಖಾಸಗಿ ಶಾಲೆಗಳು ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ವಸತಿ ಕಲ್ಪಿಸಿ ಶಿಕ್ಷಣ ಕೊಡುವ ಕಾರ್ಯ ಮಾಡುತ್ತಿವೆ.ನೌಕರರ ಮಕ್ಕಳು,ಸ್ಥಿತಿವಂತರ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ